AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಬೆಲೆ ಹೆಚ್ಚಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಜನರನ್ನು ವಂಚಿಸಿದೆ: ವಿ ಸೋಮಣ್ಣ, ಕೇಂದ್ರ ಸಚಿವ

ಪೆಟ್ರೋಲ್ ಬೆಲೆ ಹೆಚ್ಚಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಜನರನ್ನು ವಂಚಿಸಿದೆ: ವಿ ಸೋಮಣ್ಣ, ಕೇಂದ್ರ ಸಚಿವ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 22, 2024 | 3:04 PM

Share

ಆದರೆ ಕ್ಷೇತ್ರದ ಬುದ್ಧಿಜೀವಿಗಳು, ಬಡವರು ಮತ್ತು ಕಡುಬಡುವರು ತನ್ನ ಕೈಹಿಡಿದರು ಮತ್ತು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಸಂಘಟಿತ ಪರಿಶ್ರಮದಿಂದ ತಾನು ಗೆಲ್ಲುವುದು ಸಾಧ್ಯವಾಯಿತು ಎಂದು ಸೋಮಣ್ಣ ಹೇಳಿದರು. ಕನಿಷ್ಟ 15 ಸೀಟು ಗೆಲ್ಲುತ್ತೇವೆ ಎಂದಿದ್ದ ಕಾಂಗ್ರೆಸ್ ಕೇವಲ 9 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು 19ಸೀಟುಗಳನ್ನು ಗೆದ್ದಿತು ಎಂದು ಕೆಂದ್ರ ಸಚಿವ ಹೇಳಿದರು.

ಬೆಂಗಳೂರು: ನೂತನ ಸಂಸದರಿಗೆ ಇಂದು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ ಅಭಿನಂದನಾ ಸಮಾರಂಭದಲ್ಲಿ (felicitation programme) ಮಾತಾಡಿ ಕೇಂದ್ರ ಸಚಿವ ವಿ ಸೋಮಣ್ಣ (V Somanna), ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ (Siddaramaiah government) ಭವಿಷ್ಯ ಡೋಲಾಯಮಾನ ಸ್ಥಿತಿಯಲ್ಲಿದೆ, ಅದು ಇನ್ನೂ 3 ತಿಂಗಳು, 6 ತಿಂಗಳು ಅಥವಾ ಒಂದು ವರ್ಷ ಅಧಿಕಾರದಲ್ಲಿರುತ್ತದೋ ಇಲ್ಲವೋ ಅಂತ ಕುಮಾರಸ್ವಾಮಿಯವರು ಹೇಳಬೇಕು ಎಂದರು. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದಿಂದ ಜನ ಬೇಸತ್ತು ಹೋಗಿದ್ದಾರೆ, ಪೆಟ್ರೋಲ್ ಬೆಲೆಯನ್ನು ಹೆಚ್ಚಿಸುವ ಮೂಲಕ ಸರ್ಕಾರ ಜನರನ್ನು ವಂಚಿಸಿದೆ ಎಂದ ಸೋಮಣ್ಣ ಬಿಜೆಪಿ ಮತ್ತು ಜೆಡಿಎಸ್ ಒಂದಾಗಿರೋದು ಕಾಂಗ್ರೆಸ್ ನಾಯಕರ ನಿದ್ದೆ ಹಾಳುಮಾಡಿದೆ ಎಂದರು. ತುಮಕೂರು ಲೋಕಸಭಾ ಕ್ಷೇತ್ರದಿಂದ ತಾನು ಸೋಲುತ್ತೇನೆ ಅಂತ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರು. ಆದರೆ ಕ್ಷೇತ್ರದ ಬುದ್ಧಿಜೀವಿಗಳು, ಬಡವರು ಮತ್ತು ಕಡುಬಡುವರು ತನ್ನ ಕೈಹಿಡಿದರು ಮತ್ತು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಸಂಘಟಿತ ಪರಿಶ್ರಮದಿಂದ ತಾನು ಗೆಲ್ಲುವುದು ಸಾಧ್ಯವಾಯಿತು ಎಂದು ಸೋಮಣ್ಣ ಹೇಳಿದರು. ಕನಿಷ್ಟ 15 ಸೀಟು ಗೆಲ್ಲುತ್ತೇವೆ ಎಂದಿದ್ದ ಕಾಂಗ್ರೆಸ್ ಕೇವಲ 9 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು 19ಸೀಟುಗಳನ್ನು ಗೆದ್ದಿತು ಎಂದು ಕೆಂದ್ರ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ತುಮಕೂರು ಲೋಕಸಭಾ ಚುನಾವಣೆ 2024 ಫಲಿತಾಂಶ: ವಿ ಸೋಮಣ್ಣ ಗೆಲುವು, ರಾಜ್ಯದಿಂದ ರಾಷ್ಟ್ರ ರಾಜಕಾರಣದತ್ತ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More