AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಜೊತೆ ಸ್ನೇಹವಿದ್ದಿದ್ದು ನಿಜ, ಆದರೆ ಇಂಥ ಕೃತ್ಯವೆಸಗಿದಾಗ ಯಾರಾದರೂ ಸಮರ್ಥನೆ ಮಾಡಿಕೊಳ್ಳುತ್ತಾರೆಯೇ? ಜಮೀರ್ ಅಹ್ಮದ್

ದರ್ಶನ್ ಜೊತೆ ಸ್ನೇಹವಿದ್ದಿದ್ದು ನಿಜ, ಆದರೆ ಇಂಥ ಕೃತ್ಯವೆಸಗಿದಾಗ ಯಾರಾದರೂ ಸಮರ್ಥನೆ ಮಾಡಿಕೊಳ್ಳುತ್ತಾರೆಯೇ? ಜಮೀರ್ ಅಹ್ಮದ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 22, 2024 | 8:28 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಅರೋಪಿಯಾಗಿರುವ ನಟ ದರ್ಶನ್ ಬಗ್ಗೆ ಸರ್ಕಾರ ಮೃದು ಧೋರಣೆ ತಳೆದಿಲ್ಲ, ಅದರಲ್ಲೂ ವಿಶೇಷವಾಗಿ ತನ್ನ ವಿರುದ್ಧ ನಟನನ್ನು ಸಮರ್ಥಿಸಿಕೊಂಡಿರುವ ಬಗ್ಗೆ ವರದಿಗಳು ಮಾಧ್ಯಮಗಳಲ್ಲಿ ಕಾಣಿಸಿವೆ, ಅದರೆ ಅದೆಲ್ಲ ಸತ್ಯಕ್ಕೆ ದೂರ ಎಂದು ಸಚಿವ ಜಮೀರ್ ಹೇಳಿದರು.

ವಿಜಯಪುರ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಪ್ರಮುಖ ಅರೋಪಿಯಾಗಿರುವ ನಟ ದರ್ಶನ್ (actor Darshan) ಬಗ್ಗೆ ಸರ್ಕಾರ ಮೃದು ಧೋರಣೆ ತಳೆದಿಲ್ಲ, ಅದರಲ್ಲೂ ವಿಶೇಷವಾಗಿ ತನ್ನ ವಿರುದ್ಧ ನಟನನ್ನು ಸಮರ್ಥಿಸಿಕೊಂಡಿರುವ ಬಗ್ಗೆ ವರದಿಗಳು ಮಾಧ್ಯಮಗಳಲ್ಲಿ ಕಾಣಿಸಿವೆ, ಅದರೆ ಅದೆಲ್ಲ ಸತ್ಯಕ್ಕೆ ದೂರ ಎಂದು ಹೇಳಿದರು. ತನ್ನ ಮತ್ತು ದರ್ಶನ್ ನಡುವೆ ಸ್ನೇಹವಿರೋದು ಸತ್ಯ, ಅದರೆ ಇಂಥ ಕೆಲಸಗಳನ್ನು ಮಾಡಿದರೆ ಯಾರಾದರೂ ಜೊತೆಯಾಗಿ ನಿಂತುಕೊಳ್ಳುತ್ತಾರೆಯೇ? ಎಂದು ಹೇಳಿದ ಜಮೀರ್, ತಪ್ಪು ಯಾರು ಮಾಡಿದರೂ ತಪ್ಪೇ, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದರು. ಬೇರೆ ಬೇರೆ ಶಾಸಕರು ವ್ಯಕ್ತಡಿಸಿರುವ ಅಭಿಪ್ರಾಯಗಳಿಗೆ ತಾನು ಬಾಧ್ಯಸ್ಥನಲ್ಲ, ಕಾನೂನಿನ ಚೌಕಟ್ಟಿನೊಳಗೆ ತನಿಖೆ ನಡೆಯುತ್ತಿದೆ ಮತ್ತು ಇವತ್ತು ಅವರನ್ನು ಜೈಲಿಗೂ ಕಳಿಸಲಾಗಿದೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜಮೀರ್ ಅಹ್ಮದ್​ ಖಾನ್ ಆಪ್ತನಿಗೆ ಬೆಳ್ಳಂ ಬೆಳಗ್ಗೆ ಐಟಿ ಶಾಕ್: ಎಂಸಿ ವೇಣುಗೋಪಾಲ್​ ಮನೆ ಮೇಲೆ ದಾಳಿ