ದರ್ಶನ್ ಜೊತೆ ಸ್ನೇಹವಿದ್ದಿದ್ದು ನಿಜ, ಆದರೆ ಇಂಥ ಕೃತ್ಯವೆಸಗಿದಾಗ ಯಾರಾದರೂ ಸಮರ್ಥನೆ ಮಾಡಿಕೊಳ್ಳುತ್ತಾರೆಯೇ? ಜಮೀರ್ ಅಹ್ಮದ್

Updated on: Jun 22, 2024 | 8:28 PM

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಅರೋಪಿಯಾಗಿರುವ ನಟ ದರ್ಶನ್ ಬಗ್ಗೆ ಸರ್ಕಾರ ಮೃದು ಧೋರಣೆ ತಳೆದಿಲ್ಲ, ಅದರಲ್ಲೂ ವಿಶೇಷವಾಗಿ ತನ್ನ ವಿರುದ್ಧ ನಟನನ್ನು ಸಮರ್ಥಿಸಿಕೊಂಡಿರುವ ಬಗ್ಗೆ ವರದಿಗಳು ಮಾಧ್ಯಮಗಳಲ್ಲಿ ಕಾಣಿಸಿವೆ, ಅದರೆ ಅದೆಲ್ಲ ಸತ್ಯಕ್ಕೆ ದೂರ ಎಂದು ಸಚಿವ ಜಮೀರ್ ಹೇಳಿದರು.

ವಿಜಯಪುರ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ ಬಿ ಜೆಡ್ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy murder case) ಪ್ರಮುಖ ಅರೋಪಿಯಾಗಿರುವ ನಟ ದರ್ಶನ್ (actor Darshan) ಬಗ್ಗೆ ಸರ್ಕಾರ ಮೃದು ಧೋರಣೆ ತಳೆದಿಲ್ಲ, ಅದರಲ್ಲೂ ವಿಶೇಷವಾಗಿ ತನ್ನ ವಿರುದ್ಧ ನಟನನ್ನು ಸಮರ್ಥಿಸಿಕೊಂಡಿರುವ ಬಗ್ಗೆ ವರದಿಗಳು ಮಾಧ್ಯಮಗಳಲ್ಲಿ ಕಾಣಿಸಿವೆ, ಅದರೆ ಅದೆಲ್ಲ ಸತ್ಯಕ್ಕೆ ದೂರ ಎಂದು ಹೇಳಿದರು. ತನ್ನ ಮತ್ತು ದರ್ಶನ್ ನಡುವೆ ಸ್ನೇಹವಿರೋದು ಸತ್ಯ, ಅದರೆ ಇಂಥ ಕೆಲಸಗಳನ್ನು ಮಾಡಿದರೆ ಯಾರಾದರೂ ಜೊತೆಯಾಗಿ ನಿಂತುಕೊಳ್ಳುತ್ತಾರೆಯೇ? ಎಂದು ಹೇಳಿದ ಜಮೀರ್, ತಪ್ಪು ಯಾರು ಮಾಡಿದರೂ ತಪ್ಪೇ, ಉಪ್ಪು ತಿಂದವನು ನೀರು ಕುಡಿಯಲೇಬೇಕು ಎಂದರು. ಬೇರೆ ಬೇರೆ ಶಾಸಕರು ವ್ಯಕ್ತಡಿಸಿರುವ ಅಭಿಪ್ರಾಯಗಳಿಗೆ ತಾನು ಬಾಧ್ಯಸ್ಥನಲ್ಲ, ಕಾನೂನಿನ ಚೌಕಟ್ಟಿನೊಳಗೆ ತನಿಖೆ ನಡೆಯುತ್ತಿದೆ ಮತ್ತು ಇವತ್ತು ಅವರನ್ನು ಜೈಲಿಗೂ ಕಳಿಸಲಾಗಿದೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜಮೀರ್ ಅಹ್ಮದ್​ ಖಾನ್ ಆಪ್ತನಿಗೆ ಬೆಳ್ಳಂ ಬೆಳಗ್ಗೆ ಐಟಿ ಶಾಕ್: ಎಂಸಿ ವೇಣುಗೋಪಾಲ್​ ಮನೆ ಮೇಲೆ ದಾಳಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More