ಸೋಲಿನಿಂದ ಕಂಗೆಡುವುದು ಬೇಡ ಮತ್ತಷ್ಟು ಸಂಘಟಿತರಾಗಿ ಕೆಲಸ ಮಾಡೋಣ; ಕಾರ್ಯಕರ್ತರಿಗೆ ಸಂಯುಕ್ತಾ ಪಾಟೀಲ್ ಕರೆ

ಚುನಾವಣೆಯಲ್ಲಿ 6.20 ಲಕ್ಷಕ್ಕಿಂತ ಹೆಚ್ಚು ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ, ಅಷ್ಟು ಜನರನ್ನು ತಾನು ಭೇಟಿಯಾಗಿಲ್ಲವಾದರೂ ಅವರು ತನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸ ಅನನ್ಯವಾದದ್ದು ಅವರಿಗೆ ತಾನು ಚಿರಋಣಿಯಾಗಿದ್ದೇನೆ ಎಂದು ಸಚಿವ ಶಿವಾನಂದ ಪಾಟೀಲ್ ಪುತ್ರಿ ಹೇಳಿದರು. ಚುನಾವಣೆ ಸಂದರ್ಭದಲ್ಲಿ ತನ್ನ ಬೆನ್ನೆಲುಬಾಗಿ ನಿಂತ ಪತಿ, ತಾಯಿ ಮತ್ತು ತಂಗಿಯನ್ನು ಸಹ ಅವರು ನೆನೆದರು.

ಸೋಲಿನಿಂದ ಕಂಗೆಡುವುದು ಬೇಡ ಮತ್ತಷ್ಟು ಸಂಘಟಿತರಾಗಿ ಕೆಲಸ ಮಾಡೋಣ; ಕಾರ್ಯಕರ್ತರಿಗೆ ಸಂಯುಕ್ತಾ ಪಾಟೀಲ್ ಕರೆ
|

Updated on: Jun 06, 2024 | 2:48 PM

ಬಾಗಲಕೋಟೆ: ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಯುವ ಕಾಂಗ್ರೆಸ್ ನೇತಾರೆ ಸಂಯುಕ್ತಾ ಪಾಟೀಲ್ (Samyukta Patil) ಇಂದು ನಗರದಲ್ಲಿ ಪತ್ರಿಕಾ ಗೋಷ್ಟಿಯೊಂದನ್ನು ನಡೆಸಿ ಚುನಾವಣೆಯಲ್ಲಿ ತನ್ನ ಪರವಾಗಿ ಕೆಲಸ ಮಾಡಿದ ಪಕ್ಷದ ನಾಯಕರಿಗೆ, ಮುಖಂಡರಿಗೆ ಮತ್ತು ಬಾಗಲಕೋಟೆ ಹಾಗೂ ವಿಜಯಪುರದ ಸಮಸ್ತ ಕಾರ್ಯಕರ್ತರಿಗೆ (party workers) ಕೃತಜ್ಞತೆಗಳನ್ನು ಸಲ್ಲಿಸಿದರು. ಸೋಲಿನಿಂದ ಕಾರ್ಯಕರ್ತರು ಧೃತಿಗೆಡಬೇಕಿಲ್ಲ, ಇದು ವಿರೋಚಿತ ಸೋಲು ಯಾಕೆಂದರೆ 2019 ರ ಲೋಕಸಭಾ ಚುನಾವನಣೆಯಲ್ಲಿ (2019 Lok Sabha Polls) ತಮ್ಮ ಪಕ್ಷದ ಅಭ್ಯರ್ಥಿ ಗಳಿಸಿದ ಮತಗಳಿಗಿಂತ ಒಂದು ಲಕ್ಷ ಮತ ಹೆಚ್ಚು ಪಡೆದಿದ್ದೇವೆ, ಹಾಗಾಗಿ ಮತ್ತಷ್ಟು ಸಂಘಟಿತರಾಗಿ ನಾವು ಕೆಲಸ ಮಾಡಿದರೆ ಮುಂದಿನ ಚುನಾವಣೆಯಲ್ಲಿ ಫಲಿತಾಂಶ ತಮ್ಮ ಪರವಾಗಿ ಬರಲಿದೆ ಎಂದು ಸಂಯುಕ್ತಾ ಹೇಳಿದರು. ಚುನಾವಣೆಯಲ್ಲಿ 6.20 ಲಕ್ಷಕ್ಕಿಂತ ಹೆಚ್ಚು ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾರೆ, ಅಷ್ಟು ಜನರನ್ನು ತಾನು ಭೇಟಿಯಾಗಿಲ್ಲವಾದರೂ ಅವರು ತನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸ ಅನನ್ಯವಾದದ್ದು ಅವರಿಗೆ ತಾನು ಚಿರಋಣಿಯಾಗಿದ್ದೇನೆ ಎಂದು ಸಚಿವ ಶಿವಾನಂದ ಪಾಟೀಲ್ ಪುತ್ರಿ ಹೇಳಿದರು. ಚುನಾವಣೆ ಸಂದರ್ಭದಲ್ಲಿ ತನ್ನ ಬೆನ್ನೆಲುಬಾಗಿ ನಿಂತ ಪತಿ, ತಾಯಿ ಮತ್ತು ತಂಗಿಯನ್ನು ಸಹ ಅವರು ನೆನೆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪಂಚಮಸಾಲಿ ಸಮುದಾಯದ ಹೆಸರು ಹೇಳಿಕೊಂಡು ಹೊರಗಿನಿಂದ ಬಂದು ಟಿಕೆಟ್ ಪಡೆಯುವುದು ಅನ್ಯಾಯ: ವೀಣಾ ಕಾಶಪ್ಪನವರ್​

Follow us
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ