ಮಕ್ಕಳಿಬ್ಬರೂ ಲೈಂಗಿಕ ಆರೋಪಗಳಲ್ಲಿ ಜೈಲು ಸೇರಿದರೂ ರೇವಣ್ಣನ ಮೊಗದಲ್ಲಿ ಮಾಸದ ಮುಗುಳ್ನಗು!

ರಾಜ್ಯದಲ್ಲಿ ಏನು ನಡೀತಿದೆ ಅಂತ ಚೆನ್ನಾಗಿ ಗೊತ್ತಿದೆ, ಯಾರು ತಪ್ಪು ಯಾರು ಸರಿ ಅಂತ ಕಾಲವೇ ನಿರ್ಧರಿಸಲಿದೆ ಎಂದು ಹೇಳಿದ ಅವರು ಸೂರಜ್ ನಿಂದ ಅಸಹಜ ಲೈಂಗಿಕ ಅತ್ಯಾಚಾರಕ್ಕೆ ಒಳಗಾಗಿರುವೆನೆಂದು ಆರೋಪಿಸುತ್ತಿರುವ ಯುವಕನ ವಿರುದ್ಧ ಸೂರಜ್ ಆಪ್ತ ಶಿವಕುಮಾರ್ ಎನ್ನುವವನು ದೂರು ಸಲ್ಲಿಸಲು ಹೋದ ವಿಚಾರ ತನಗೆ ಗೊತ್ತಿಲ್ಲ ಎನ್ನುತ್ತಾರೆ.

ಮಕ್ಕಳಿಬ್ಬರೂ ಲೈಂಗಿಕ ಆರೋಪಗಳಲ್ಲಿ ಜೈಲು ಸೇರಿದರೂ ರೇವಣ್ಣನ ಮೊಗದಲ್ಲಿ ಮಾಸದ ಮುಗುಳ್ನಗು!
|

Updated on: Jun 23, 2024 | 4:11 PM

ಬೆಂಗಳೂರು: ಲೈಂಗಿಕ ದುರಾಚಾರದ ಆರೋಪಗಳಲ್ಲಿ ತನ್ನಿಬ್ಬರು ಮಕ್ಕಳು ಜೈಲು ಸೇರಿದರೂ ಹೆಚ್ ಡಿ ರೇವಣ್ಣ (HD Revanna) ಅವರ ಮುಖದಲ್ಲಿ ಮುಗುಳ್ನಗು ಮಾಸಿಲ್ಲ. ಇವತ್ತು ಬೆಂಗಳೂರಿಗೆ ಆಗಮಿಸಿದ ಅವರನ್ನು ಮಾಧ್ಯಮ ಪ್ರತಿನಿಧಿಗಳು ಸೂರಜ್ ರೇವಣ್ಣ (Suraj Revanna) ಬಗ್ಗೆ ಪ್ರಶ್ನೆ ಕೇಳಿದಾಗ ರೇವಣ್ಣ ನಗುತ್ತಲೇ, ನಾನೀಗ ಯಾವುದೇ ಹೇಳಿಕೆ ನೀಡಲ್ಲ. ಇಂಥ ಷಡ್ಯಂತ್ರಗಳಿಗೆಲ್ಲ (conspiracy) ನಾನು ಹೆದರಲ್ಲ, ನನಗೆ ದೇವರ ಮೇಲೆ ನಂಬಿಕೆ ಇದೆ ಮತ್ತು ನಾಡಿನ ನ್ಯಾಯಾಂಗ ವ್ಯವಸ್ಥೆ ಮೇಲೆ ಸಹ ವಿಶ್ವಾಸವಿದೆ ಎಂದು ಹೇಳಿದರು. ರಾಜ್ಯದಲ್ಲಿ ಏನು ನಡೀತಿದೆ ಅಂತ ಚೆನ್ನಾಗಿ ಗೊತ್ತಿದೆ, ಯಾರು ತಪ್ಪು ಯಾರು ಸರಿ ಅಂತ ಕಾಲವೇ ನಿರ್ಧರಿಸಲಿದೆ ಎಂದು ಹೇಳಿದ ಅವರು ಸೂರಜ್ ನಿಂದ ಅಸಹಜ ಲೈಂಗಿಕ ಅತ್ಯಾಚಾರಕ್ಕೆ ಒಳಗಾಗಿರುವೆನೆಂದು ಆರೋಪಿಸುತ್ತಿರುವ ಯುವಕನ ವಿರುದ್ಧ ಸೂರಜ್ ಆಪ್ತ ಶಿವಕುಮಾರ್ ಎನ್ನುವವನು ದೂರು ಸಲ್ಲಿಸಲು ಹೋದ ವಿಚಾರ ತನಗೆ ಗೊತ್ತಿಲ್ಲ ಎನ್ನುತ್ತಾರೆ.

ರೇವಣ್ಣ ಸಹ ಮಹಿಳೆಯೊಬ್ಬರ ಮೇಲೆ ಲೈಂಗಿಕ ಅತ್ಯಾಚಾರ ಮತ್ತು ಇನ್ನೊಬ್ಬ ಮಹಿಳೆಯ ಅಪಹರಣ ನಡೆಸಿದ ಪ್ರಕರಣಗಳಲ್ಲಿ ಜಾಮೀನು ಪಡೆದು ಜೈಲುವಾಸ ತಪ್ಪಿಸಿಕೊಂಡಿದ್ದಾರೆ. ಆವರ ಪತ್ನಿ ಭವಾನಿ ರೇವಣ್ಣ ಸಹ ಮಹಿಳೆಯೊಬ್ಬರನ್ನು ಬೆದರಿಸಿದ ಆರೋಪದಲ್ಲಿ ನಿರೀಕ್ಷಣಾ ಜಾಮೀನು ಪಡೆದು ಅರೆಸ್ಟ್ ಆಗುವುದರಿಂದ ಬಚಾವಾಗಿದ್ದಾರೆ. ಒಂದು ಪಕ್ಷ ಇವರಿಬ್ಬರಿಗೆ ಬೇಲ್ ಸಿಕ್ಕಿರದಿದ್ದರೆ ಇಡೀ ಕುಟುಂಬವೇ ಜೈಲಿನಲ್ಲಿರಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುತಿತ್ತು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರೇವಣ್ಣ ಕುಟುಂಬಕ್ಕೆ ಮತ್ತೊಂದು ಶಾಕ್, ಸೂರಜ್​ ರೇವಣ್ಣ ಕೇಸ್​ ಸಿಐಡಿಗೆ ವರ್ಗಾವಣೆ

Follow us
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ