ಲೋಕಸಭಾ ಚುನಾವಣೆಯಲ್ಲಾದ ಹಿನ್ನಡೆಯಿಂದ ವಿಚಲಿತ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ!

ಲೋಕಸಭಾ ಚುನಾವಣೆಯಲ್ಲಾದ ಹಿನ್ನಡೆಯಿಂದ ವಿಚಲಿತ ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ!
|

Updated on: Jun 25, 2024 | 2:14 PM

ದೇವಸ್ಥಾನದಲ್ಲಿ ಶಿವಕುಮಾರ್ ಕುಟುಂಬ ಮಹಾಪೂಜೆ ಮತ್ತು ಅಶ್ಲೇಶ ಬಲಿ ಪೂಜೆಯಲ್ಲಿ ಭಾಗಿಯಾಗಿತ್ತೆಂದು ನಮ್ಮ ಮಂಗಳೂರು ವರದಿಗಾರ ಮಾಹಿತಿ ನೀಡಿದ್ದಾರೆ. ಉಪ ಮುಖ್ಯಮಂತ್ರಿಯ ಕುಟುಂಬವನ್ನು ದೇವಸ್ಥಾನದ ವತಿಯಿಂದ ವಾದ್ಯಮೇಳ, ಕುಂಬಕಳಶದೊಂದಿಗೆ ಸ್ವಾಗತಿಸಲಾಯಿತು. ದೇವಸ್ಥಾನದ ಆನೆಯು ಶಿವಕುಮಾರ್, ಅವರ ಪತ್ನಿ ಉಷಾ ಶಿವಕುಮಾರ್ ಮತ್ತು ಮಗನ ತಲೆಗಳ ಮೇಲೆ ಸೊಂಡಿಲನ್ನಿಟ್ಟು ಆಶೀರ್ವಾದ ಮಾಡಿತು.

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha polls) ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಾದ ಹಿನ್ನಡೆಯಿಂದ ವಿಚಲಿತರಾದಂತೆ ಕಾಣುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಸಾಂತ್ವನ ಕಂಡುಕೊಳ್ಳಲು ದೇವರ ಮೊರೆ ಹೋಗುತ್ತಿರುವುದರಲ್ಲಿ ಆಶ್ಚರ್ಯವೇನೂ ಇಲ್ಲ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅವರ ಸಹೋದರ ಡಿಕೆ ಸುರೇಶ್ (DK Suresh), ರಾಜಕಾರಣಕ್ಕೆ ತೀರ ಹೊಸಬರಾಗಿರುವ ಡಾ ಸಿಎನ್ ಮಂಜುನಾಥ್ ಅವರಿಗೆ ಸೋತಿದ್ದು ಶಿವಕುಮಾರ್ ಗೆ ಹೆಚ್ಚಿನ ಆಘಾತವನ್ನುಂಟು ಮಾಡಿದೆ. ಇಂದು ಅವರು ಕುಟುಂಬ ಸಮೇತರಾಗಿ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕಿನಲ್ಲಿರುವ ಕುಕ್ಕೆ ಸುಬ್ರಹಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನದಲ್ಲಿ ಶಿವಕುಮಾರ್ ಕುಟುಂಬ ಮಹಾಪೂಜೆ ಮತ್ತು ಅಶ್ಲೇಶ ಬಲಿ ಪೂಜೆಯಲ್ಲಿ ಭಾಗಿಯಾಗಿತ್ತೆಂದು ನಮ್ಮ ಮಂಗಳೂರು ವರದಿಗಾರ ಮಾಹಿತಿ ನೀಡಿದ್ದಾರೆ. ಉಪ ಮುಖ್ಯಮಂತ್ರಿಯ ಕುಟುಂಬವನ್ನು ದೇವಸ್ಥಾನದ ವತಿಯಿಂದ ವಾದ್ಯಮೇಳ, ಕುಂಬಕಳಶದೊಂದಿಗೆ ಸ್ವಾಗತಿಸಲಾಯಿತು. ದೇವಸ್ಥಾನದ ಆನೆಯು ಶಿವಕುಮಾರ್, ಅವರ ಪತ್ನಿ ಉಷಾ ಶಿವಕುಮಾರ್ ಮತ್ತು ಮಗನ ತಲೆಗಳ ಮೇಲೆ ಸೊಂಡಿಲನ್ನಿಟ್ಟು ಆಶೀರ್ವಾದ ಮಾಡಿತು. ಕುಟುಂಬದ ಸದಸ್ಯರೆಲ್ಲ ಆನೆಗೆ ನಮಸ್ಕರಿಸುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಇವಿಎಂ ಮಿಷನ್ ಮೇಲಿನ ಅನುಮಾನ: ಎಲಾನ್ ಮಸ್ಕ್ ಬೆಂಬಲಿಸಿ ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ