AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತೀಶ್ ಜಾರಕಿಹೊಳಿ ವಿಷಯದಲ್ಲಿ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು ಯಾಕೆಂದು ಗೊತ್ತಾಗಲಿಲ್ಲ!

ಸತೀಶ್ ಜಾರಕಿಹೊಳಿ ವಿಷಯದಲ್ಲಿ ಡಿಕೆ ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು ಯಾಕೆಂದು ಗೊತ್ತಾಗಲಿಲ್ಲ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jun 07, 2024 | 4:49 PM

Share

ಮೂವರು ಡಿಸಿಎಂಗಳ ಪ್ರಸ್ತಾಪ ತೀವ್ರ ಚರ್ಚೆಗೆ ಬಂದಾಗ, ಶಿವಕುಮಾರ್ ಸಾರ್ವಜನಿಕವಾಗಿಯೂ ಸತೀಶ್ ರೊಂದಿಗೆ ಹೆಚ್ಚು ಸಲುಗೆಯಿಂದ ಬಿಹೇವ್ ಮಾಡಲು ಪ್ರಯತ್ನಿಸಿದ ದೃಶ್ಯಗಳನ್ನು ನಾವು ತೋರಿಸಿದ್ದೇವೆ. ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಮ್ಮೆ ಸಂಪುಟ ಸಭೆ ಕರೆದಿದ್ದಾಗ, ಸೌಧದ ಆವರಣದಲ್ಲಿ ಶಿವಕುಮಾರ್ ಓಡಿಬಂದು ಸತೀಶ್ ತೆಕ್ಕೆಗೆ ಬಿದ್ದಿದ್ದರು.

ಬೆಂಗಳೂರು: ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಪ್ರಾಯಶಃ ಮೊದಲ ಬಾರಿಗೆ ಸಚಿವ ಮತ್ತು ಪಕ್ಷದ ಹಿರಿಯ ನಾಯಕ ಸತೀಶ್ ಜಾರಕಿಹೊಳಿ (Satish Jarkiholi) ವಿರುದ್ಧ ಕಟುವಾದ ಟೀಕೆ (harsh comment) ಮಾಡಿದರು. ಪತ್ರಕರ್ತರೊಬ್ಬರು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿರುವುದಕ್ಕೆ ಪ್ರೊಡ್ಯೂಸರ್ (ಡಿಕೆ ಶಿವಕುಮಾರ್) ತೆಗೆದುಕೊಂಡ ತಪ್ಪು ನಿರ್ಧಾರಗಳು ಕಾರಣ ಎಂದು ಹೇಳಿದ್ದಾರೆ ಅಂತ ಗಮನಕ್ಕೆ ತಂದಾಗ ತೀಕ್ಷವಾಗಿ ಪ್ರತಿಕ್ರಿಯಿಸಿದ ಶಿವಕುಮಾರ್, ಅವರನ್ನು ಮೆಂಟಲ್ ಅಸ್ಪತ್ರೆಗೆ ಕಳಿಸೋಣ ಎಂದರು. ಸಾಮಾನ್ಯವಾಗಿ ಶಿವಕುಮಾರ್, ಸತೀಶ್ ವಿಷಯದಲ್ಲಿ ಕಾಮೆಂಟ್ ಮಾಡಲ್ಲ, ಇನ್ ಫ್ಯಾಕ್ಟ್ ಇವರು ಸಲುಗೆಯಿಂದ ವರ್ತಿಸಿದಾಗಲೂ ಲೋಕೋಪಯೋಗಿ ಸಚಿವನೊಂದಿಗೆ ಗಂಭೀರ ಮುಖಮುದ್ರೆಯೊಂದಿಗೆ ರಿಯಾಕ್ಟ್ ಮಾಡುತ್ತಾರೆ. ಮೂವರು ಡಿಸಿಎಂಗಳ ಪ್ರಸ್ತಾಪ ತೀವ್ರ ಚರ್ಚೆಗೆ ಬಂದಾಗ, ಶಿವಕುಮಾರ್ ಸಾರ್ವಜನಿಕವಾಗಿಯೂ ಸತೀಶ್ ರೊಂದಿಗೆ ಹೆಚ್ಚು ಸಲುಗೆಯಿಂದ ಬಿಹೇವ್ ಮಾಡಲು ಪ್ರಯತ್ನಿಸಿದ ದೃಶ್ಯಗಳನ್ನು ನಾವು ತೋರಿಸಿದ್ದೇವೆ. ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಮ್ಮೆ ಸಂಪುಟ ಸಭೆ ಕರೆದಿದ್ದಾಗ, ಸೌಧದ ಆವರಣದಲ್ಲಿ ಶಿವಕುಮಾರ್ ಓಡಿಬಂದು ಸತೀಶ್ ತೆಕ್ಕೆಗೆ ಬಿದ್ದಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಲೋಕಸಭಾ ಚುನಾವಣೆಯಲ್ಲಿ ಕಳಾಹೀನ ಪ್ರದರ್ಶನ, ಆತ್ಮಾವಲೋಕನ ಶುರುಮಾಡಿದ ಡಿಕೆ ಶಿವಕುಮಾರ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.