ಹೇಮಾವತಿ ನದಿ ನಮ್ಮದು, ಜೀವ ಕೊಟ್ಟೇವು ಆದರೆ ನೀರನ್ನು ಮಾತ್ರ ಕೊಡಲ್ಲ: ರೈತ ಮುಖಂಡರು

ಹೇಮಾವತಿ ನದಿ ನಮ್ಮದು, ಜೀವ ಕೊಟ್ಟೇವು ಆದರೆ ನೀರನ್ನು ಮಾತ್ರ ಕೊಡಲ್ಲ: ರೈತ ಮುಖಂಡರು
|

Updated on: Jun 25, 2024 | 10:57 AM

ರೈತರಿಗೆ ವಿಷವುಣ್ಣಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕೆನಾಲ್ ಯೋಜನೆ ಬೇಡವೆಂದು ರೈತರು ಗೋಗರೆದರೂ ಅವರ ಅಳಲನ್ನು ತಿರಸ್ಕರಿಸಲಾಗಿದೆ. ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿ ಎರಡೂ ಇಲ್ಲ, ಅವೆರಡನ್ನು ತೆರೆಸುವ ಪ್ರಯತ್ನವನ್ನು ಇವತ್ತಿನ ಪ್ರತಿಭಟನೆಯ ಮೂಲಕ ಮಾಡುತ್ತಿದ್ದೇವೆ. ಜೀವವಾದರೂ ಕೊಟ್ಟೇವು ಆದರೆ ಯಾವ ಕಾರಣಕ್ಕೂ ನೀರು ಮಾತ್ರ ಬಿಡಲ್ಲ ಎಂದು ಹೇಳಿದರು.

ತುಮಕೂರು: ಹೇಮಾವತಿ ಎಕ್ಸ್​ಪ್ರೆಸ್ ಲಿಂಕ್ ಕೆನಾಲ್ ಯೋಜನೆಯ (Hemavati Express Link Canal Project) ಬಗ್ಗೆ ಜಿಲ್ಲೆಯ ಜನರ ಅಸಮಾಧಾನ ಮತ್ತು ಆಕ್ರೋಶ ಮೊದಲಿಂದಲೂ ಇತ್ತು. ವಿಷಯ ಪುನಃ ಮುನ್ನೆಲೆಗೆ ಬಂದು ಕೆನಾಲ್ ಯೋಜನೆಯ ಕಾಮಗಾರಿ (project works) ಆರಂಭಗೊಳ್ಳುತ್ತಿದ್ದಂತೆಯೇ ಹೇಮಾವತಿ ಹೋರಾಟ ಸಮಿತಿ, ಪ್ರಗತಿಪರ ರೈತ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು (pro Kannada organizations), ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಜಿಲ್ಲಾ ಘಟಕಗಳು ಇಂದು ಜಿಲ್ಲೆಯಾದ್ಯಂತ ಬಂದ್ ಗೆ ಕರೆ ನೀಡಿ ಪ್ರತಿಭಟನೆ ನಡೆಸುತ್ತಿವೆ. ಪ್ರತಿಭಟನನೆಕಾರರ ಪರವಾಗಿ ಟಿವಿ9 ತುಮಕೂರು ಪ್ರತಿನಿಧಿಯೊಂದಿಗೆ ಮಾತಾಡಿದ ರೈತ ಮುಖಂಡರೊಬ್ಬರು, ಹೇಮಾವತಿ ನೀರನ್ನು ಮಾಗಡಿ ಮತ್ತು ಕನಕಪುರಕ್ಕೆ ಕೊಂಡೊಯ್ಯುವ ಹುನ್ನಾರ ನಡೆಯುತ್ತಿದೆ, ರೈತರಿಗೆ ವಿಷವುಣ್ಣಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಕೆನಾಲ್ ಯೋಜನೆ ಬೇಡವೆಂದು ರೈತರು ಗೋಗರೆದರೂ ಅವರ ಅಳಲನ್ನು ತಿರಸ್ಕರಿಸಲಾಗಿದೆ. ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿ ಎರಡೂ ಇಲ್ಲ, ಅವೆರಡನ್ನು ತೆರೆಸುವ ಪ್ರಯತ್ನವನ್ನು ಇವತ್ತಿನ ಪ್ರತಿಭಟನೆಯ ಮೂಲಕ ಮಾಡುತ್ತಿದ್ದೇವೆ. ಜೀವವಾದರೂ ಕೊಟ್ಟೇವು ಆದರೆ ಯಾವ ಕಾರಣಕ್ಕೂ ನೀರು ಮಾತ್ರ ಬಿಡಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಹೇಮಾವತಿ ನದಿಗೆ ಹಾರಿ ಪ್ರಥಮ ದರ್ಜೆ ಗುತ್ತಿಗೆದಾರ ಆತ್ಮಹತ್ಯೆ: ಕಾರಣವೇನು?   

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ