ಮಾಜಿ ಸಂಸದ ಚಲ್ಲಕುಮಾರ್ ಮತ್ತು ಪರಿಷತ್ ಮಾಜಿ ಸದಸ್ಯ ಮೋಹನ್ ಕೊಂಡಜ್ಜಿಗೆ ಗೃಹಸಚಿವರನ್ನು ಭೇಟಿಯಾಗುವ ಅವಕಾಶ ನಿರಾಕರಣೆ!

ಆದರೆ, ಅವರೊಂದಿಗೆ ಸ್ವಲ್ಪ ಹೊತ್ತು ವಾದಿಸುವ ಚಲ್ಲಕುಮಾರ್ ಮತ್ತು ಕೊಂಡಜ್ಜಿ ದುರ್ದಾನ ತೆಗೆದುಕೊಂಡವರ ಹಾಗೆ ಪೊಲೀಸರನ್ನು ಶಪಿಸುತ್ತಾ ಅಲ್ಲಿಂದ ನಿರ್ಗಮಿಸುತ್ತಾರೆ. ಆದರೆ, ಗಮನಿಸಬೇಕಾದ ಮತ್ತು ಅಚ್ಚರಿ ಹುಟ್ಟಿಸುವ ಸಂಗತಿಯೇನೆಂದರೆ ಸೆಕ್ಯುರಿಟಿಯವರು ಮಾಜಿ ಶಾಸಕ ರಾಜೂಗೌಡರನ್ನು ಒಳಗೆ ಬಿಡುತ್ತಾರೆ!

ಮಾಜಿ ಸಂಸದ ಚಲ್ಲಕುಮಾರ್ ಮತ್ತು ಪರಿಷತ್ ಮಾಜಿ ಸದಸ್ಯ ಮೋಹನ್ ಕೊಂಡಜ್ಜಿಗೆ ಗೃಹಸಚಿವರನ್ನು ಭೇಟಿಯಾಗುವ ಅವಕಾಶ ನಿರಾಕರಣೆ!
|

Updated on: Jun 22, 2024 | 11:48 AM

ಬೆಂಗಳೂರು: ಕೆಲವು ಸಲ ನಮ್ಮ ಗಣ್ಯರನ್ನು ಮತ್ತು ಅವರ ಮನೋಭಾವವನ್ನು ಅರ್ಥಮಾಡಿಕೊಳ್ಳುವುದು ಕಷ್ಟ. ಅವರು ವಿಚಿತ್ರವಾಗಿ ವರ್ತಿಸುವ ಸಂದರ್ಭಗಳನ್ನು ನಾವು ಹಿಂದೆಯೂ ವರದಿ ಮಾಡಿದ್ದೇವೆ. ಇವತ್ತು ಬೆಳಗ್ಗೆ ಬೆಂಗಳೂರಲ್ಲಿ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಅವರ ಮನೆ ಮುಂದೆ ನಡೆದ ದೃಶ್ಯವನ್ನು ಗಮನಿಸಿ. ಸಚಿವರನ್ನು ಭೇಟಿಯಾಗಲು ಮಾಜಿ ಸಂಸದ ಚಲ್ಲಕುಮಾರ್ (Challakumar) ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಕೊಂಡಜ್ಜಿ (Mohan Kondajji) ಬಂದಿದ್ದಾರೆ. ಇವರಿಬ್ಬರು ಪರಮೇಶ್ವರ್ ಭೇಟಿಯಾಗಲು ಅಪಾಂಯಿಂಟ್ಮೆಂಟ್ ತೆಗೆದುಕೊಂಡಿದ್ದರೋ ಇಲ್ಲವೋ ಗೊತ್ತಿಲ್ಲ. ಅದ್ಯಾವ ಕಾರಣಕ್ಕೋ? ಸಚಿವರ ನಿವಾಸದ ಬಳಿ ಭದ್ರತೆ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸರು ಚಲ್ಲಕುಮಾರ್ ಮತ್ತು ಕೊಂಡಜ್ಜಿ ಅವರನ್ನು ಒಳಗಡೆ ಪ್ರವೇಶಿಸಿದಂತೆ ತಡೆಯುತ್ತಾರೆ ಮತ್ತು ಅವರನ್ನು ಒಳಗಡೆ ಹೋಗಲು ಬಿಡೋದಿಲ್ಲ. ಯಾರನ್ನೂ ಒಳಗೆ ಬಿಡಕೂಡದೆಂಬ ಆದೇಶವನ್ನು ಪೊಲೀಸರು ಪಾಲಿಸುತ್ತಿದ್ದರೆ? ಇರಬಹುದು. ಆದರೆ, ಅವರೊಂದಿಗೆ ಸ್ವಲ್ಪ ಹೊತ್ತು ವಾದಿಸುವ ಚಲ್ಲಕುಮಾರ್ ಮತ್ತು ಕೊಂಡಜ್ಜಿ ದುರ್ದಾನ ತೆಗೆದುಕೊಂಡವರ ಹಾಗೆ ಪೊಲೀಸರನ್ನು ಶಪಿಸುತ್ತಾ ಅಲ್ಲಿಂದ ನಿರ್ಗಮಿಸುತ್ತಾರೆ. ಆದರೆ, ಗಮನಿಸಬೇಕಾದ ಮತ್ತು ಅಚ್ಚರಿ ಹುಟ್ಟಿಸುವ ಸಂಗತಿಯೇನೆಂದರೆ ಸೆಕ್ಯುರಿಟಿಯವರು ಮಾಜಿ ಶಾಸಕ ರಾಜೂಗೌಡರನ್ನು ಒಳಗೆ ಬಿಡುತ್ತಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಂಜಲಿ ತಂಗಿಗೆ ಶಿಕ್ಷಣ, ಮನೆ ಮತ್ತು ನೌಕರಿಯ ಭರವಸೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ್

Follow us
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಕೆಂಪೇಗೌಡರ ಜಯಂತಿಯಲ್ಲಿ ಹಾಸನ ಡಿಸಿ ಕಣ್ಣೀರು, ಕಾರಣವೇನು ಗೊತ್ತಾ?
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ಚಂದ್ರಶೇಖರ ಶ್ರೀಗಳು ನೀಡಿದ ಹೇಳಿಕೆಗೆ ಆರ್ ಅಶೋಕ ತಮ್ಮ ವ್ಯಾಖ್ಯಾನ ನೀಡಿದರು!
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ದರ್ಶನ್ ಕಾಣಲು ಬಂದ ವಿಶೇಷ ಚೇತನ ಅಭಿಮಾನಿಯ ಮಾತು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಮಳೆಯಿಂದಾಗಿ ಯೂನಿಯನ್ ಬ್ಯಾಂಕ್ ಎಸಿಯೊಳಗೆ ಬಂದು ಅವಿತು ಕುಳಿತ ಮರಿ ಹೆಬ್ಬಾವು
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
ಶ್ರೀಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗಲ್ಲ: ಶಾಮನೂರು ಶಿವಶಂಕರಪ್ಪ
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
‘ಸೂಪರ್​ ಆಗಿದೆ’: ಬೆಂಗಳೂರಲ್ಲಿ ‘ಕಲ್ಕಿ 2898 ಎಡಿ’ ನೋಡಿ ಕನ್ನಡಿಗರು ಖುಷ್
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಮಂಗಳೂರು: ಜಲದಿಗ್ಭಂದನಕ್ಕೊಳಗಾದ ಮನೆ, ಮನೆಯಲ್ಲಿ ಒಂಟಿ ಮಹಿಳೆ ವಾಸ!
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಸಿದ್ದರಾಮಯ್ಯ ಕರೆದಿರುವ ಸಭೆಗೆ ಹೋಗ್ತೀರಾ ಅಂದಾಗ ಕುಮಾರಸ್ವಾಮಿ ಉಡಾಫೆ ಉತ್ತರ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ಕೇಂಪೇಗೌಡ 515ನೇ ಜಯಂತಿ: ನಾಡಪ್ರಭುಗೆ ಪುಷ್ಪ ನಮನ ಸಲ್ಲಿಸಿದ ಸಿದ್ದರಾಮಯ್ಯ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ
ದೆಹಲಿಗೆ ತೆರಳಿ ಪ್ರಧಾನಿ ಮೋದಿ, ಹಲವಾರು ಸಚಿವರನ್ನು ಭೇಟಿಯಾಗಲಿರುವ ಸಿಎಂ