ಸೀನಿಯರ್ ಮಾತು ಹಾಗಿರಲಿ, 1985ರಲ್ಲಿ ನಾನು ಸಾತನೂರುನಿಂದ ಸ್ಪರ್ಧಿಸಿದ್ದರೆ ಶಿವಕುಮಾರ್ ಯಾವತ್ತೂ ಶಾಸಕನಾಗುತ್ತಿರಲಿಲ್ಲ: ಕುಮಾರಸ್ವಾಮಿ

ಸೀನಿಯರ್ ಮಾತು ಹಾಗಿರಲಿ, 1985ರಲ್ಲಿ ನಾನು ಸಾತನೂರುನಿಂದ ಸ್ಪರ್ಧಿಸಿದ್ದರೆ ಶಿವಕುಮಾರ್ ಯಾವತ್ತೂ ಶಾಸಕನಾಗುತ್ತಿರಲಿಲ್ಲ: ಕುಮಾರಸ್ವಾಮಿ
|

Updated on: Jun 25, 2024 | 1:28 PM

ಆಗ ದೇವೇಗೌಡರು ಎರಡು ಕ್ಷೇತ್ರಗಳಲ್ಲಿ ಗೆದ್ದಿದ್ದರು ಮತ್ತು ಸಾತನೂರು ಕ್ಷೇತ್ರವನ್ನು ತೆರವು ಮಾಡಿ ಕುಮಾರಸ್ವಾಮಿಯನ್ನು ಕಣಕ್ಕಿಳಿಸಿ ಎಂದು ಆಗಿನ ಜನತಾ ಪಕ್ಷದ ಮುಖಂಡರ ಮಾತನ್ನು ಅವರು ಆಲಿಸಿದ್ದರೆ ಮತ್ತು ತಾನು ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಿದ್ದರೆ (1985ರಲ್ಲಿ) ಶಿವಕುಮಾರ್ ಯಾವತ್ತೂ ಶಾಸಕನಾಗುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ದೆಹಲಿ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮತ್ತು ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನಡುವೆ ಮಾತಿನ ಕಾಳಗ ಮುಂದುವರಿದಿದೆಯಾದರೂ ಇಬ್ಬರೂ ಟೋನ್ ಡೌನ್ ಮಾಡಿರೋದು ಗಮನಾರ್ಹ. ಈಗ ಅವರ ನಡುವೆ ಸೀನಿಯಾರಿಟಿಗೆ (seniority) ಸಂಬಂಧಿಸಿದಂತೆ ವಾಗ್ವಾದ ನಡೆಯುತ್ತಿದೆ. ರಾಜಕಾರಣದಲ್ಲಿ ಕುಮಾರಸ್ವಾಮಿಗಿಂತ ತಾನು ಹತ್ತು ವರ್ಷ ಸೀನಿಯರ್ ಅಂತ ಶಿವಕುಮಾರ್ ಹೇಳಿರುವುದಕ್ಕೆ ದೆಹಲಿಯಲ್ಲಿಂದು ಬೆಳಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, 1985ರಲ್ಲಿ ಹೆಚ್ ಡಿ ದೇವೇಗೌಡರ ವಿರುದ್ಧ ಶಿವಕುಮಾರ್ ಸ್ಪರ್ಧಿಸಿದ್ದಾಗ ಸಾತನೂರು ವಿಧಾನಸಭಾ ಕ್ಷೇತ್ರದ ಉಸ್ತವಾರಿಹಿಸಿಕೊಂಡಿದ್ದು ತಾನು, ಅಗಲೇ ತಾನು ಕ್ಷೇತ್ರದ ಎಲ್ಲ ಹಳ್ಳಿಗಳ ಜನರ ಪರಿಚಯ ಮಾಡಿಕೊಂಡಿದ್ದೆ. ಆಗ ದೇವೇಗೌಡರು ಎರಡು ಕ್ಷೇತ್ರಗಳಲ್ಲಿ ಗೆದ್ದಿದ್ದರು ಮತ್ತು ಸಾತನೂರು ಕ್ಷೇತ್ರವನ್ನು ತೆರವು ಮಾಡಿ ಕುಮಾರಸ್ವಾಮಿಯನ್ನು ಕಣಕ್ಕಿಳಿಸಿ ಎಂದು ಆಗಿನ ಜನತಾ ಪಕ್ಷದ ಮುಖಂಡರ ಮಾತನ್ನು ಅವರು ಆಲಿಸಿದ್ದರೆ ಮತ್ತು ತಾನು ಸಾತನೂರು ಕ್ಷೇತ್ರದಿಂದ ಸ್ಪರ್ಧಿಸಿದ್ದರೆ (1985ರಲ್ಲಿ) ಶಿವಕುಮಾರ್ ಯಾವತ್ತೂ ಶಾಸಕನಾಗುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣದಲ್ಲಿ ನಿನ್ನೆ ಶಿವಕುಮಾರ್ ಜನಸ್ಪಂದನ ಕಾರ್ಯಕ್ರಮ ನಡೆಸಿ ಜನರ ಕುಂದುಕೊರತೆಗಳನ್ನು ಆಲಿಸಿದಕ್ಕೆ ಆಭಾರಿಯಾಗಿದ್ದೇನೆಂದ ಕುಮಾರಸ್ವಾಮಿ, ಈಗಲಾದರೂ ಅವರಿಗೆ ಚನ್ನಪಟ್ಟಣ ನೆನಪಾಗಿದೆಯಲ್ಲ ಅಂತ ಸಂತೋಷಿಸುತ್ತೇನೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಂಡ್ಯದಲ್ಲಿ ಕುಮಾರಸ್ವಾಮಿಯವರ ಅಭಿನಂದನಾ ಕಾರ್ಯಕ್ರಮದ ಫ್ಲೆಕ್ಸ್ ಗಳಲ್ಲಿ ರೇವಣ್ಣನ ಫೋಟೋಗೆ ಜಾಗವಿಲ್ಲ!

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ