AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ತಪ್ಪು ಮಾಡಿಲ್ಲ ಅಂತಾದ್ರೆ ಪ್ರಜ್ವಲ್ ಮತ್ತು ಭವಾನಿ ರೇವಣ್ಣಗೆ ಕಾನೂನು ಎದುರಿಸಲು ಏನು ಧಾಡಿ? ಪ್ರಿಯಾಂಕ್ ಖರ್ಗೆ

ಯಾವುದೇ ತಪ್ಪು ಮಾಡಿಲ್ಲ ಅಂತಾದ್ರೆ ಪ್ರಜ್ವಲ್ ಮತ್ತು ಭವಾನಿ ರೇವಣ್ಣಗೆ ಕಾನೂನು ಎದುರಿಸಲು ಏನು ಧಾಡಿ? ಪ್ರಿಯಾಂಕ್ ಖರ್ಗೆ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 03, 2024 | 6:05 PM

Share

ದು ಸಾಮಾನ್ಯ ಕುಟುಂಬವಲ್ಲ, ದೇವೇಗೌಡರು ದೇಶದ ಪ್ರಧಾನಿಯಾಗಿದ್ದವರು, ಕುಮಾರಸ್ವಾಮಿ ಎರಡೆರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು, ರೇವಣ್ಣ ಸಹ ಮಂತ್ರಿಯಾಗಿದ್ದವರು, ಪ್ರಜ್ವಲ್ ಸಂಸದ ಮತ್ತು ಸೂರಜ್ ವಿಧಾನ ಪರಿಷತ್ ಸದಸ್ಯ. ಹೀಗಾಗಿ ಕುಟುಂಬವು ಕಾನೂನು ಪಾಲನೆಯಲ್ಲಿ ಬೇರೆಯವರಿಗೆ ಮಾದರಿಯಾಗಿರಬೇಕು, ವೃಥಾ ನೈತಿಕತೆ ಬೋಧಿಸುವುದರಲ್ಲಿ ಅರ್ಥವಿಲ್ಲ ಎಂದು ಖರ್ಗೆ ಹೇಳಿದರು.

ಬೆಂಗಳೂರು: ನಮ್ಮ ಕುಟುಂಬವನ್ನು ಟಾರ್ಗೆಟ್ ಮಾಡಲಾಗಿದೆ ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ನಡೆದಿದೆ ಎಂದು ಹೇಳುವ ಹೆಚ್ ಡಿ ದೇವೇಗೌಡ (HD Devegowda) ಕುಟುಂಬದ ಸದಸ್ಯರು ಕಾನೂನಿನಿಂದ ತಪ್ಪಿಸಿಕೊಳ್ಳುತ್ತಿರುವುದ್ಯಾಕೆ? ಮಾಧ್ಯಮಗಳ ಮುಂದೆ ಬಂದಾಗ ನಮ್ಮಿಂದ ಏನೂ ತಪ್ಪು ನಡೆದಿಲ್ಲ, ಕಾನೂನಿನ ಸಮರ (legal battle) ನಡೆಸಿ ನಿರ್ದೋಷಿಗಳೆಂದು ಸಾಬೀತು ಮಾಡುತ್ತೇವೆ ಅನ್ನುತ್ತಾರೆ ಅದರೆ ಕಾನೂನು ಪ್ರಕ್ರಿಯೆ ಎದುರಿಸಲು ಮಾತ್ರ ಸಿದ್ಧರಿಲ್ಲ, ಇದು ಏನನ್ನು ತೋರಿಸುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕೇಳಿದರು. ಮೊದಲು ಪ್ರಜ್ವಲ್ ರೇವಣ್ಣ ಒಂದು ತಿಂಗಳು ನಾಪತ್ತೆಯಾಗಿ ರಾಹುಲ್ ಗಾಂಧಿ ಹೆಸರು ಹೇಳುತ್ತಾ ವಾಪಸ್ಸು ಬರುತ್ತಾರೆ. ಅವರು ಬಂದ ಮೇಲೆ ಭವಾನಿ ರೇವಣ್ಣ ನಾಪತ್ತೆ! ಅವರೆಲ್ಲಿದ್ದಾರೆ ಅಂತ ಗೊತ್ತಿಲ್ಲ. ಏನೂ ತಪ್ಪು ಮಾಡಿಲ್ಲವೆಂದರೆ ಹೀಗೆ ತಪ್ಪಿಸಿಕೊಳ್ಳೋದು ಯಾಕೆ? ಇದು ಸಾಮಾನ್ಯ ಕುಟುಂಬವಲ್ಲ, ದೇವೇಗೌಡರು ದೇಶದ ಪ್ರಧಾನಿಯಾಗಿದ್ದವರು, ಕುಮಾರಸ್ವಾಮಿ ಎರಡೆರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು, ರೇವಣ್ಣ ಸಹ ಮಂತ್ರಿಯಾಗಿದ್ದವರು, ಪ್ರಜ್ವಲ್ ಸಂಸದ ಮತ್ತು ಸೂರಜ್ ವಿಧಾನ ಪರಿಷತ್ ಸದಸ್ಯ. ಹೀಗಾಗಿ ಕುಟುಂಬವು ಕಾನೂನು ಪಾಲನೆಯಲ್ಲಿ ಬೇರೆಯವರಿಗೆ ಮಾದರಿಯಾಗಿರಬೇಕು, ವೃಥಾ ನೈತಿಕತೆ ಬೋಧಿಸುವುದರಲ್ಲಿ ಅರ್ಥವಿಲ್ಲ ಎಂದು ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕುಮಾರಸ್ವಾಮಿ ಮನೆಮಗ ತಪ್ಪು ಮಾಡಿದ್ದಾನೆ, ಅವರ ಕುಟುಂಬದವರೇ ರಾಜೀನಾಮೆ ನೀಡಬೇಕು: ಪ್ರಿಯಾಂಕ್ ಖರ್ಗೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More