ರಾಹುಲ್ ಗಾಂಧಿ ಇವತ್ತು ಹಾಜರಾಗದಿದ್ದರೆ ಕೋರ್ಟ್ ವಾರಂಟ್ ಜಾರಿಗೊಳಿಸಲಿದೆ: ವಿನೋದ, ಬಿಜೆಪಿ ಪರ ವಕೀಲ

ವಕೀಲ ವಿನೋದ್ ಹೇಳುವ ಪ್ರಕಾರ ಕಾಂಗ್ರೆಸ್ ನಾಯಕರು ಆಗಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆಧಾರರಹಿತ ಆರೋಪಗಳನ್ನು ಮಾಡಿದ್ದರು. ಇದೇ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿತ್ತು.

ರಾಹುಲ್ ಗಾಂಧಿ ಇವತ್ತು ಹಾಜರಾಗದಿದ್ದರೆ ಕೋರ್ಟ್ ವಾರಂಟ್ ಜಾರಿಗೊಳಿಸಲಿದೆ: ವಿನೋದ, ಬಿಜೆಪಿ ಪರ ವಕೀಲ
|

Updated on: Jun 01, 2024 | 12:33 PM

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಇಂದು ನಗರದ ಸಿವಿಲ್ ಕೋರ್ಟ್ ಗೆ ಹಾಜರಾದರು. ಅವರಿಬ್ಬರು ಮತ್ತು ರಾಹುಲ್ ಗಾಂಧಿ (Rahul Gandhi) ವಿರುದ್ಧ ಕರ್ನಾಟಕ ಬಿಜೆಪಿ ಮಾನನಷ್ಟ ಮೊಕದ್ದಮೆ ಹೂಡಿದೆ. ಬಿಜೆಪಿ ಪರ ವಕಾಲತ್ತು ವಹಿಸಿಕೊಂಡಿರುವ ವಕೀಲ ವಿನೋದ್ ಹೇಳುವ ಪ್ರಕಾರ ಕಾಂಗ್ರೆಸ್ ನಾಯಕರು ಆಗಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಭ್ರಷ್ಟಾಚಾರದ ಆಧಾರರಹಿತ ಆರೋಪಗಳನ್ನು ಮಾಡಿದ್ದರು. ಇದೇ ಹಿನ್ನೆಲೆಯಲ್ಲಿ ಕರ್ನಾಟಕ ಬಿಜೆಪಿ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಆದೇಶ ನೀಡಿರುವುದರಿಂದ ಸಿಎಂ ಮತ್ತು ಡಿಸಿಎಂ ಇವತ್ತು ಹಾಜರಾಗಿದ್ದಾರೆ, ರಾಹುಲ್ ಗಾಂಧಿಯವರು ಸಹ ಹಾಜರಾಗಬೇಕೆಂದು ನ್ಯಾಯಾಲಯದ ಆದೇಶದಲ್ಲಿದೆ. ಈ ಹಿಂದೆ ಸಹ ಕೋರ್ಟ್ ಹಾಜರಾಗುವಂತೆ ಆದೇಶ ನೀಡಿದ್ದಾಗ ಚುನಾವಣೆಯ ಕಾರಣ ಬರಲಾಗಲ್ಲ ಎಂದು ಹೇಳಿದ್ದರು, ಈ ಸಲವೂ ಅವರು ಬಾರದೆ ಹೋದರೆ ಕೋರ್ಟ್ ವಾರಂಟ್ ಜಾರಿಗೊಳಿಸುತ್ತದೆ ಎಂದು ವಕೀಲ ವಿನೋದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪರಂಪರೆಯನ್ನು ಮಗನೇ ಮುಂದುವರೆಸಿಕೊಂಡು ಹೋಗಬೇಕು; ರಾಯ್‌ಬರೇಲಿಯಲ್ಲಿ ರಾಹುಲ್ ಗಾಂಧಿ ಸ್ಪರ್ಧೆಗೆ ಶಶಿ ತರೂರ್ ಸ್ಪಷ್ಟನೆ

Follow us
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ