ಇಂಡಿಯಾ ಮೈತ್ರಿಕೂಟಕ್ಕೆ ಕನಿಷ್ಟ 295 ಸೀಟು ಸಿಗಲಿವೆ, ಸೀಟುಗಳ ಸಂಖ್ಯೆ ಹೆಚ್ಚಬಹುದೇ ಹೊರತು ಕಮ್ಮಿಯಾಗಲ್ಲ: ಮಲ್ಲಿಕಾರ್ಜುನ ಖರ್ಗೆ

ಮೈತ್ರಿಕೂಟದ ಎಲ್ಲ ಪಕ್ಷಗಳ ನಾಯಕರು ನೀಡಿದ ಮಾಹಿತಿಯ ಆಧಾರದ ಮೇಲೆ ತಮಗೆ ಸಿಗುವ ಸ್ಥಾನಗಳ ಸಂಖ್ಯೆಯನ್ನು ಕಂಡುಕೊಳ್ಳಲಾಗಿದೆ ಎಂದು ಖರ್ಗೆ ಹೇಳಿದರು. ನಾಯಕರು ಜನರಿಂದ ಮತ್ತು ತಮ್ಮ ತಮ್ಮ ಪಕ್ಷಗಳ ಕಾರ್ಯಕರ್ತರಿಂದ ಕಲೆಹಾಕಿರುವ ಮಾಹಿತಿಯನ್ನು ಸಭೆಯಲ್ಲಿ ಶೇರ್ ಮಾಡಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಇಂಡಿಯಾ ಮೈತ್ರಿಕೂಟಕ್ಕೆ ಕನಿಷ್ಟ 295 ಸೀಟು ಸಿಗಲಿವೆ, ಸೀಟುಗಳ ಸಂಖ್ಯೆ ಹೆಚ್ಚಬಹುದೇ ಹೊರತು ಕಮ್ಮಿಯಾಗಲ್ಲ: ಮಲ್ಲಿಕಾರ್ಜುನ ಖರ್ಗೆ
|

Updated on: Jun 01, 2024 | 6:40 PM

ದೆಹಲಿ: ಇಂಡಿಯಾ ಮೈತ್ರಿಕೂಟದ (INDIA alliance) ಪ್ರಮುಖ ನಾಯಕರು ಇಂದು ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದರು. ಸಭೆಯ ನಂತರ ಮಾಧ್ಯಮ ಹೇಳಿಕೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸುಮಾರು ಎರಡೂವರೆ ತಾಸುಗಳ ನಡೆದ ಸಭೆಯಲ್ಲಿ ಹಲವಾರು ವಿಷಯಗಳನ್ನು ವಿಸ್ತೃತವಾಗಿ ಚರ್ಚಿಸಲಾಯಿತು ಎಂದರು. ಚುನಾವಣೆ ಸಮಯದಲ್ಲಿ ಮೈತ್ರಿಕೂಟದ ಸದಸ್ಯ ಪಕ್ಷಗಳಿಂದ ಆಗಿರಬಹುದಾದ ಪ್ರಮಾದಗಳು ಮತ್ತು ಫಲಿತಾಂಶಗಳು (poll results) ಪ್ರಕಟವಾದ ಮೇಲೆ ನಡೆಯುವ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು ಎಂದು ಖರ್ಗೆ ಹೇಳಿದರು. ಇಂಡಿಯ ಮೈತ್ರಿಕೂಟಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 295 ಸ್ಥಾನಗಳು ಸಿಗಲಿವೆ ಎಂದ ಖರ್ಗೆ ಅಂತಿಮ ಫಲಿತಾಂಶಗಳು ಹೊರಬಿದ್ದಾಗ ತಮಗೆ ಸಿಗುವ ಸ್ಥಾನಗಳ ಸಂಖ್ಯೆ ಹೆಚ್ಚಾಗಬಹುದೇ ಹೊರತು ಕಡಿಮೆಯಂತೂ ಆಗಲಾರದು ಎಂದು ಹೇಳಿದರು. ಮೈತ್ರಿಕೂಟದ ಎಲ್ಲ ಪಕ್ಷಗಳ ನಾಯಕರು ನೀಡಿದ ಮಾಹಿತಿಯ ಆಧಾರದ ಮೇಲೆ ತಮಗೆ ಸಿಗುವ ಸ್ಥಾನಗಳ ಸಂಖ್ಯೆಯನ್ನು ಕಂಡುಕೊಳ್ಳಲಾಗಿದೆ ಎಂದು ಖರ್ಗೆ ಹೇಳಿದರು. ನಾಯಕರು ಜನರಿಂದ ಮತ್ತು ತಮ್ಮ ತಮ್ಮ ಪಕ್ಷಗಳ ಕಾರ್ಯಕರ್ತರಿಂದ ಕಲೆಹಾಕಿರುವ ಮಾಹಿತಿಯನ್ನು ಸಭೆಯಲ್ಲಿ ಶೇರ್ ಮಾಡಿದರು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಮ್ಮ ನಿರ್ಧಾರ ಒಪ್ಪದಿದ್ದರೆ ಪಕ್ಷ ತೊರೆಯಬೇಕಾಗುತ್ತದೆ; ಅಧೀರ್ ರಂಜನ್​ಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಸಂದೇಶ

Follow us
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್