ಚನ್ನಪಟ್ಟಣ ಉಪಚುನಾವಣೆ: ಟಿಕೆಟ್ ಯಾರಿಗಾದರೂ ನೀಡಲಿ ಮೈತ್ರಿ ಧರ್ಮ ನಿಭಾಯಿಸುತ್ತೇವೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪ್ರಭಾವ ಹೇಗಿದೆ ಅನ್ನೋದನ್ನು ಸಮೀಕ್ಷೆ ನಡೆಸಿ ವರದಿಯನ್ನು ಕೇಂದ್ರದ ಬಿಜೆಪಿ ನಾಯಕರಿಗೆ ಕಳಿಸುತ್ತೇವೆ ಎಂದು ಹೇಳಿದರು. ತೀರ್ಮಾನ ಬಿಜೆಪಿ ನಾಯಕರಿಗೆ ಬಿಟ್ಟಿದ್ದು, ಅವರು ಜೆಡಿಎಸ್ ಪಕ್ಷಕ್ಕೆ ಟಿಕೆಟ್ ನೀಡಿದರೆ ಸಂತೋಷ, ಬಿಜೆಪಿ ಅಭ್ಯರ್ಥಿಗೆ ನೀಡಿದರೂ ಮೈತ್ರಿ ಧರ್ಮ ನಿಭಾಯಿಸುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಚನ್ನಪಟ್ಟಣ ಉಪಚುನಾವಣೆ: ಟಿಕೆಟ್ ಯಾರಿಗಾದರೂ ನೀಡಲಿ ಮೈತ್ರಿ ಧರ್ಮ ನಿಭಾಯಿಸುತ್ತೇವೆ: ನಿಖಿಲ್ ಕುಮಾರಸ್ವಾಮಿ
|

Updated on: Jun 08, 2024 | 2:49 PM

ಬೆಂಗಳೂರು: ಚನ್ನಪಟ್ಟಣ ಕ್ಷೆತ್ರದಿಂದ ವಿಧಾನಸಭೆಗೆ (Channapatna Assembly constituency) ಆಯ್ಕೆಯಾಗಿದ್ದ ಹೆಚ್ ಡಿ ಕುಮಾರಸ್ವಾಮಿಯವರು(HD Kumaraswamy) ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿರುವುದರಿಂದ ವಿಧಾನಸಭಾ ಕ್ಷೇತ್ರ ತೆರವುಗೊಂಡಿದ್ದು ಅಲ್ಲಿ ಉಪ ಚುನಾವಣೆ ನಡೆಯಲಿದೆ. ಈಗ ಹುಟ್ಟಿರುವ ಪ್ರಶ್ನೆಯೇನೆಂದರೆ, ಉಪ ಚುನಾವಣೆಯಲ್ಲಿ ಅಲ್ಲಿಂದ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಲಿದ್ದಾರೆಯೇ ಅಥವಾ ಬಿಜೆಪಿ? ಮಾಧ್ಯಮದವರು ಇವತ್ತು ನಗರದಲ್ಲಿ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿಯವರನ್ನು (Nikhil Kumaraswamy) ಕೇಳಿದಾಗ ಲೋಕಸಭಾ ಚುನಾವಣೆಯಲ್ಲಿ  ಹೆಚ್ ಡಿ ದೇವೇಗೌಡ ಮತ್ತು ಕುಮಾರಸ್ವಾಮಿಯವರು 3 ಕ್ಷೇತ್ರಗಳನ್ನು ಕೇಳಿದ್ದರು, ಮತ್ತು ಕೇಂದ್ರದ ಬಿಜೆಪಿ ನಾಯಕರು ಅವರ ಬೇಡಿಕೆಗೆ ಮನ್ನಣೆ ನೀಡಿದ್ದರು, ಟಿಕೆಟ್ ಹಂಚಿಕೆ ವಿಚಾರದಲ್ಲಿ  ಯಾವುದೇ ರೀತಿ ಗೊಂದಲ ಉಂಟಾಗಲು ನಾವು ಅವಕಾಶ  ನೀಡಿರಲಿಲ್ಲ ಎಂದಯ ಹೇಳಿದರು. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪ್ರಭಾವ ಹೇಗಿದೆ ಅನ್ನೋದನ್ನು ಸಮೀಕ್ಷೆ ನಡೆಸಿ ವರದಿಯನ್ನು ಕೇಂದ್ರದ ಬಿಜೆಪಿ ನಾಯಕರಿಗೆ ಕಳಿಸುತ್ತೇವೆ ಎಂದು ಹೇಳಿದರು. ತೀರ್ಮಾನ ಬಿಜೆಪಿ ನಾಯಕರಿಗೆ ಬಿಟ್ಟಿದ್ದು, ಅವರು ಜೆಡಿಎಸ್ ಪಕ್ಷಕ್ಕೆ ಟಿಕೆಟ್ ನೀಡಿದರೆ ಸಂತೋಷ, ಬಿಜೆಪಿ ಅಭ್ಯರ್ಥಿಗೆ ನೀಡಿದರೂ ಮೈತ್ರಿ ಧರ್ಮ ನಿಭಾಯಿಸುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಬಿಜೆಪಿ ಶಾಸಕನ ವಿರುದ್ಧ ಟೀಕೆ ಮಾಡಿದ್ದು ಅಪ್ರಬುದ್ಧತೆ!

Follow us
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್