AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಭೆಯಲ್ಲಿ ಕ್ಯಾಬಿನೆಟ್ ರಚನೆ ಬಗ್ಗೆ ಚರ್ಚೆ ನಡೆಯಲಿಲ್ಲ, ನಾನು ಯಾವುದೇ ಬೇಡಿಕೆ ಇಟ್ಟಿಲ್ಲ: ಕುಮಾರಸ್ವಾಮಿ

ಸಭೆಯಲ್ಲಿ ಕ್ಯಾಬಿನೆಟ್ ರಚನೆ ಬಗ್ಗೆ ಚರ್ಚೆ ನಡೆಯಲಿಲ್ಲ, ನಾನು ಯಾವುದೇ ಬೇಡಿಕೆ ಇಟ್ಟಿಲ್ಲ: ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 05, 2024 | 7:49 PM

Share

ಎಲ್ಲರೂ ಒಟ್ಟಾಗಿರೋಣ ಮತ್ತು ಒಟ್ಟಾಗಿ ಮುಂದೆ ಸಾಗೋಣ ಅಂತ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು, ಕ್ಯಾಬಿನೆಟ್ ರಚನೆ ಬಗ್ಗೆ ಚರ್ಚೆಯಾಗಲಿಲ್ಲ ಮತ್ತು ತಾನು ಯಾವುದೇ ಬೇಡಿಕೆ ಇಟ್ಟಿಲ್ಲ, ತನ್ನನ್ನು ಕೃಷಿ ಸಚಿವನಾಗಿ ಮಾಡುವ ವಿಷಯ ಕೇವಲ ಊಹಾಪೋಹ ಮಾತ್ರ ಎನ್ನುತ್ತಾ ಕುಮಾರಸ್ವಾಮಿ ಹೊರಟುಬಿಟ್ಟರು.

ದೆಹಲಿ: ರಾಜ್ಯ ಜೆಡಿಎಸ್ ಅಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಇಂದು ಬೆಳಗ್ಗೆ ಬೆಂಗಳೂರಿಂದ ದೆಹಲಿಗೆ ಹೊರಡುವಾಗ ತರಾತುರಿಯಲ್ಲಿದ್ದರು ಮತ್ತು ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ನೇತೃತ್ವದಲ್ಲಿ ನಡೆದ ಎನ್ ಡಿಎ ಮೈತ್ರಿಕೂಟದ ಸಭೆಯಲ್ಲಿ (NDA Meeting) ಭಾಗಿಯಾಗಿ ಹೊರಬಂದಾಗಲೂ ಅದೇ ಧಾವಂತದಲ್ಲಿದ್ದರು. ತಮ್ಮನ್ನು ಹೊತ್ತ ಕಾರು ಚಲಿಸುತ್ತಿರುವಂತೆಯೇ ನಮ್ಮ ದೆಹಲಿ ವರದಿಗಾರನೊಂದಿಗೆ ಮಾತಾಡಿದ ಅವರು, ಇದು ಪರಸ್ಪರ ಅಭಿನಂದಿಸುವ, ಶುಭಾಷಯ ವಿನಿಮಯ ಮಾಡಿಕೊಳ್ಳುವ ಸಭೆಯಾಗಿತ್ತು, ಅದಕ್ಕೆ ಮಿಗಿಲಾಗಿ ಬೇರೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು. ಎಲ್ಲರೂ ಒಟ್ಟಾಗಿರೋಣ ಮತ್ತು ಒಟ್ಟಾಗಿ ಮುಂದೆ ಸಾಗೋಣ ಅಂತ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು, ಕ್ಯಾಬಿನೆಟ್ ರಚನೆ ಬಗ್ಗೆ ಚರ್ಚೆಯಾಗಲಿಲ್ಲ ಮತ್ತು ತಾನು ಯಾವುದೇ ಬೇಡಿಕೆ ಇಟ್ಟಿಲ್ಲ, ತನ್ನನ್ನು ಕೃಷಿ ಸಚಿವನಾಗಿ ಮಾಡುವ ವಿಷಯ ಕೇವಲ ಊಹಾಪೋಹ ಮಾತ್ರ ಎನ್ನುತ್ತಾ ಕುಮಾರಸ್ವಾಮಿ ಹೊರಟುಬಿಟ್ಟರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಧಾವಂತದಲ್ಲಿ ದೆಹಲಿಗೆ ಹೊರಟ ಕುಮಾರಸ್ವಾಮಿ ಎನ್ ಡಿಎ ಮೈತ್ರಿಕೂಟವೇ ಸರ್ಕಾರ ರಚಿಸೋದು ಎಂದರು!