ಅಧಿಕಾರಿಗಳ ಜೊತೆ ಸೇರಿ ನಿಷ್ಠೆಯಿಂದ ಕೆಲಸ ಮಾಡುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ: ವಿ ಸೋಮಣ್ಣ, ಕೇಂದ್ರ ಸಚಿವ

ರಾಜ್ಯದ ಹಲವಾರು ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿರುವ ತನಗೆ ಯಾವುದೇ ಖಾತೆ ನೀಡಿದರೂ ಅದನ್ನು ನಿಷ್ಠೆಯಿಂದ ನಿಭಾಯಿಸುವುದಾಗಿ ಹೇಳಿದರು. ತನ್ನೊಂದಿಗೆ ಮಾತಾಡಿದ ಪ್ರಧಾನ ಮಂತ್ರಿಯವರು, ನೀವೊಂದು ಸಾಧನೆ ಮಾಡಿದ್ದೀರಿ ಮತ್ತು ಅಧಿಕಾರಿಗಳ ಜೊತೆ ಸೇರಿ ನಿಷ್ಠೆಯಿಂದ ಕೆಲಸ ಮಾಡಿ, ಯಾವುದೇ ರೀತಿಯ ಗೊಂದಲ ಇಟ್ಟುಕೊಳ್ಳಬೇಡಿ ಮತ್ತು ಸಮಸ್ಯೆ ಎದುರಾದಾಗ ಸೀನಿಯರ್ ಗಳ ಸಲಹೆ ಪಡೆಯಿರಿ ಮತ್ತು ತನ್ನನ್ನೂ ಸಂಪರ್ಕಿಸಿ ಎಂದು ಹೇಳಿದರು ಎಂದು ಸೋಮಣ್ಣ ತಿಳಿಸಿದರು.

ಅಧಿಕಾರಿಗಳ ಜೊತೆ ಸೇರಿ ನಿಷ್ಠೆಯಿಂದ ಕೆಲಸ ಮಾಡುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ: ವಿ ಸೋಮಣ್ಣ, ಕೇಂದ್ರ ಸಚಿವ
|

Updated on: Jun 10, 2024 | 11:54 AM

ದೆಹಲಿ: ಕೇಂದ್ರದಲ್ಲಿ ಸಚಿವ ಸ್ಥಾನ ಗಿಟ್ಟಿಸಿರುವ ಹಿರಿಯ ಬಿಜೆಪಿ ನಾಯಕ ವಿ ಸೋಮಣ್ಣ (V Somanna) ಖುಷಿಯಿಂದ ಬೀಗುತ್ತಿದ್ದಾರೆ. ದೆಹಲಿಯಲ್ಲಿ ಟಿವಿ9 ಪ್ರತಿನಿಧಿಯೊಂದಿಗೆ ಮಾತಾಡಿದ ಅವರು, 2008-09 ರಲ್ಲಿ ಬಿಜೆಪಿ (BJP) ಸೇರಿರುವ ತನಗೆ ಪಕ್ಷ ತಾಯಿಯಿದ್ದಂತೆ. ಪಕ್ಷದ ಸಂದೇಶವನ್ನು ಜನರಿಗೆ ತಲುಪಿಸುವ ಕೆಲಸವನ್ನು ಇದುವರೆಗೆ ಮಾಡಿಕೊಂಡು ಬಂದಿದ್ದೇನೆ, ಕೇಂದ್ರದ ಸಚಿವನಾಗಿ ಅದನ್ನು ಮುಂದುವರಿಸುತ್ತೇನೆ ಎಂದು ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ದೂರದೃಷ್ಟಿ ಚಿಂತನೆ ಮತ್ತು ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆ ಜನರಿಗೆ ಗೊತ್ತಿಲ್ಲದಿಲ್ಲ, ಅವರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಸೋಮಣ್ಣ ಹೇಳಿದರು. ಮಂತ್ರಿಸ್ಥಾನ ನೀಡಿದ ಬಗ್ಗೆ ಪ್ರಧಾನಮಂತ್ರಿಯವರ ಕಚೇರಿಯಿಂದ ಬಂದಾಗ ಸಂತೋಷವನ್ನು ಎಲ್ಲಕ್ಕೂ ಮೊದಲು ಗಣೇಶನೊಂದಿಗೆ ಹಂಚಿಕೊಂಡಿದ್ದಾಗಿ ಹೇಳಿದ ಸೋಮಣ್ಣ ಆಮೇಲೆ ತುಮಕೂರು ಮಹಾಜನತೆಗೆ ಮತ್ತು ಕುಟುಂಬದವರೊಂದಿಗೆ ಹಂಚಿಕೊಂಡಿರುವೆನೆಂದರು. ರಾಜ್ಯದ ಹಲವಾರು ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿರುವ ತನಗೆ ಯಾವುದೇ ಖಾತೆ ನೀಡಿದರೂ ಅದನ್ನು ನಿಷ್ಠೆಯಿಂದ ನಿಭಾಯಿಸುವುದಾಗಿ ಹೇಳಿದರು. ತನ್ನೊಂದಿಗೆ ಮಾತಾಡಿದ ಪ್ರಧಾನ ಮಂತ್ರಿಯವರು, ನೀವೊಂದು ಸಾಧನೆ ಮಾಡಿದ್ದೀರಿ ಮತ್ತು ಅಧಿಕಾರಿಗಳ ಜೊತೆ ಸೇರಿ ನಿಷ್ಠೆಯಿಂದ ಕೆಲಸ ಮಾಡಿ, ಯಾವುದೇ ರೀತಿಯ ಗೊಂದಲ ಇಟ್ಟುಕೊಳ್ಳಬೇಡಿ ಮತ್ತು ಸಮಸ್ಯೆ ಎದುರಾದಾಗ ಸೀನಿಯರ್ ಗಳ ಸಲಹೆ ಪಡೆಯಿರಿ ಮತ್ತು ತನ್ನನ್ನೂ ಸಂಪರ್ಕಿಸಿ ಎಂದು ಹೇಳಿದರು ಎಂದು ಸೋಮಣ್ಣ ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ತುಮಕೂರು ಬಿಜೆಪಿ ಟಿಕೆಟ್​ ಫೈಟ್: ಟಿಕೆಟ್ ಸಿಗುವ ವಿಶ್ವಾಸದಲ್ಲಿ ಮಾಧುಸ್ವಾಮಿ; ಮತ್ತೊಬ್ಬ ಆಕಾಂಕ್ಷಿ ವಿ ಸೋಮಣ್ಣ ಹೇಳುವುದೇನು?

 

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್