AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಮಳೆಗೆ ಕೆರೆಯಂತಾದ ಹೊನ್ನಾಳಿಯ ಖಾಸಗಿ ಬಸ್ ನಿಲ್ದಾಣ, ಶಾಸಕ ಶಾಂತನಗೌಡರೇ ಈ ಕಡೆ ಬರಬೇಡಿ!

ಒಂದೇ ಮಳೆಗೆ ಕೆರೆಯಂತಾದ ಹೊನ್ನಾಳಿಯ ಖಾಸಗಿ ಬಸ್ ನಿಲ್ದಾಣ, ಶಾಸಕ ಶಾಂತನಗೌಡರೇ ಈ ಕಡೆ ಬರಬೇಡಿ!

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 07, 2024 | 5:28 PM

Share

ಬಸ್ ನಿಲ್ಧಾಣದಲ್ಲಿ ಈ ಪಾಟಿ ನೀರು ಹರಿದು ಬಂದರೆ, ಮಹಿಳೆಯರು, ವಯಸ್ಸಾದವರು ಬಸ್ ಹತ್ತುವುದು ಹೇಗೆ ಶಾಂತನಗೌಡರೇ? ನಿಮ್ಮ ಮುಖ್ಯಮಂತ್ರಿ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಮಾಡುತ್ತಿದ್ದಾರಂತೆ, ಹೋಗಿ ಸರತಿ ಸಾಲಲ್ಲಿ ನಿಂತು ಅನುದಾನ ಬಿಡುಗಡೆ ಮಾಡಿಸಿಕೊಂಡು ಕೆಲಸಗಳನ್ನ ಮಾಡಿಸಿ ಕೃತಾರ್ಥರಾಗಿ.

ದಾವಣಗೆರೆ: ವಿಡಿಯೋದ ಆರಂಭಿಕ ಭಾಗದಲ್ಲಿ ಕಾಣೋದು ಒಂದು ಬಸ್ ನಿಲ್ದಾಣ ಅಂತ ನಾವು ಹೇಳಿದರೆ ನೀವು ನಂಬಲೇಬೇಕು ಮಾರಾಯ್ರೇ. ಜಿಲ್ಲೆಯ ಹೊನ್ನಾಳಿ ಪಟ್ಟಣ (Honnali Town) ಚಿಕ್ಕ ಊರೇನೂ ಅಲ್ಲ. ಅದು ತಾಲ್ಲೂಕು ಕೇಂದ್ರ ಮತ್ತು ವಿಧಾನಸಭಾ ಕ್ಷೇತ್ರ. ಮೊದಲು ಬಿಜೆಪಿಯ ಎಂಪಿ ರೇಣುಕಾಚಾರ್ಯ (MP Renukacharya) ಪ್ರತಿನಿಧಿಸುತ್ತಿದ್ದರು ಮತ್ತು ಈಗ ಕಾಂಗ್ರೆಸ್ ಪಕ್ಷದ ಡಿಜಿ ಶಾಂತನಗೌಡ (DG Shantanagowda). ಇವರ ನಡುವೆ ಕೆಸರೆರಚಾಟ, ಮಣ್ಣೆರಚಾಟ, ನೀರೆರಚಾಟ ವಿಧಾನಸಭಾ ಚುನಾವಣೆನ ಸಮಯದಿಂದ ಜಾರಿಯಲ್ಲಿದೆ. ಹೊನ್ನಾಳಿಯಲ್ಲಿ ಇವತ್ತು ಭರ್ಜರಿ ಮಳೆಯಾಗಿದೆ. ದೃಶ್ಯದಲ್ಲಿ ಕಂಡಿದ್ದು ಖಾಸಗಿ ಬಸ್ ನಿಲ್ದಾಣವಂತೆ. ಖಾಸಗಿಯಾದರೇನು ಸರ್ಕಾರಿಯಾದರರೇನು? ಅಲ್ಲಿ ಓಡಾಡುವ ಜನ ಖಾಸಗಿಯವರಲ್ಲವಲ್ಲ? ಬಸ್ ನಿಲ್ಧಾಣದಲ್ಲಿ ಈ ಪಾಟಿ ನೀರು ಹರಿದು ಬಂದರೆ, ಮಹಿಳೆಯರು, ವಯಸ್ಸಾದವರು ಬಸ್ ಹತ್ತುವುದು ಹೇಗೆ ಶಾಂತನಗೌಡರೇ? ನಿಮ್ಮ ಮುಖ್ಯಮಂತ್ರಿ ಅಭಿವೃದ್ಧಿ ಕೆಲಸಗಳಿಗೆ ಹಣ ಬಿಡುಗಡೆ ಮಾಡುತ್ತಿದ್ದಾರಂತೆ, ಹೋಗಿ ಸರತಿ ಸಾಲಲ್ಲಿ ನಿಂತು ಅನುದಾನ ಬಿಡುಗಡೆ ಮಾಡಿಸಿಕೊಂಡು ಕೆಲಸಗಳನ್ನ ಮಾಡಿಸಿ ಕೃತಾರ್ಥರಾಗಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಾಗಿನಿಂದ ಯಡಿಯೂರಪ್ಪ ಬಗ್ಗೆ ಸೋಮಣ್ಣ ಹಗುರವಾಗಿ ಮಾತಾಡುತ್ತಿದ್ದಾರೆ: ಎಂಪಿ ರೇಣುಕಾಚಾರ್ಯ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More