ವಿಜಯೇಂದ್ರಗೆ ಶಾಲು ಹೊದಿಸಿ ಕೃತಜ್ಞತೆ ಮತ್ತು ಧನ್ಯವಾದ ಸಲ್ಲಿಸಿದ ಸಂಸದ ತೇಜಸ್ವೀ ಸೂರ್ಯ

ನಂತರ ತೇಜಸ್ವೀ ಸೂರ್ಯ ನಾಳೆ ದೆಹಲಿಗೆ ಹೋಗುತ್ತಿರುವ ವಿಷಯ ವಿಜಯೇಂದ್ರಗೆ ಹೇಳಿದರು. ಪ್ರೀತಂ ಗೌಡ ಎರಡು-ಮೂರು ದಿನಗಳಿಂದ ಬೆಂಗಳೂರಲ್ಲಿದ್ದಾರೆ ಮತ್ತು ಬಹಳ ಸಂತಸದಲ್ಲಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ 17 ಸ್ಥಾನ ಸಿಕ್ಕಿದ್ದು ಅವರನ್ನು ಹೆಚ್ಚು ಸಂತೋಷವಾಗಿಸಿದೆಯೋ ಆಥವಾ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋತಿದ್ದೋ ಅಂತ ಅವರೇ ಹೇಳಬೇಕು!

ವಿಜಯೇಂದ್ರಗೆ ಶಾಲು ಹೊದಿಸಿ ಕೃತಜ್ಞತೆ ಮತ್ತು ಧನ್ಯವಾದ ಸಲ್ಲಿಸಿದ ಸಂಸದ ತೇಜಸ್ವೀ ಸೂರ್ಯ
|

Updated on: Jun 05, 2024 | 6:21 PM

ರಾಮನಗರ: ರಾಜ್ಯ ಬಿಜೆಪಿ ನಾಯಕರು ಖುಷಿಯಿಂದ ಬೀಗುತ್ತಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಕಿರಿಯ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ ಮತ್ತು ಅವರೊಂದಿಗೆ ಬಹಳ ಆತ್ಮೀಯವಾಗಿ ವ್ಯವಹರಿಸುತ್ತಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸತತ ಎರಡನೇ ಬಾರಿ ಸಂಸತ್ತಿಗೆ ಆಯ್ಕೆಯಾಗಿರುವ ತೇಜಸ್ವೀ ಸೂರ್ಯ (Tejasvi Surya) ಇಂದು ರಾಮನಗರದಲ್ಲಿ ವಿಜಯೇಂದ್ರರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ಪಕ್ಷದ ಯುವ ಸಂಸದರಲ್ಲಿ ಒಬ್ಬರಾಗಿರುವ ತೇಜಸ್ವಿ ತೆರೆದ ಸ್ಥಳದಲ್ಲಿ ರಾಜ್ಯಾಧ್ಯಕ್ಷನಿಗೆ ಶಾಲು ಹೊದಿಸಿ ಗೌರವ ಸಲ್ಲಿಸಿದರು. ತಮ್ಮೊಂದಿಗೆ ಸಿಹಿತಿಂಡಿಯ ಪೊಟ್ಟಣ ಹಿಡಿದುಕೊಂಡಿದ್ದ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ (Preetah Gowda), ಅಣ್ಣಾ, ತೇಜಸ್ವೀಯವರ ಬಾಯಿ ಸಿಹಿ ಮಾಡಿ ಅಂತ ತೆರೆದ ಪೊಟ್ಟಣವನ್ನು ವಿಜಯೇಂದ್ರಗೆ ನೀಡಿದಾಗ ಅವರು ಲಡ್ಡುವನ್ನು ಸ್ವಲ್ಪಮಾತ್ರ ತುಂಡರಿಸಿ ಸಂಸದನ ಬಾಯಿಗೆ ಹಾಕಿದರು. ನಂತರ ತೇಜಸ್ವೀ ಸೂರ್ಯ ನಾಳೆ ದೆಹಲಿಗೆ ಹೋಗುತ್ತಿರುವ ವಿಷಯ ವಿಜಯೇಂದ್ರಗೆ ಹೇಳಿದರು. ಪ್ರೀತಂ ಗೌಡ ಎರಡು-ಮೂರು ದಿನಗಳಿಂದ ಬೆಂಗಳೂರಲ್ಲಿದ್ದಾರೆ ಮತ್ತು ಬಹಳ ಸಂತಸದಲ್ಲಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ 17 ಸ್ಥಾನ ಸಿಕ್ಕಿದ್ದು ಅವರನ್ನು ಹೆಚ್ಚು ಸಂತೋಷವಾಗಿಸಿದೆಯೋ ಆಥವಾ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಸೋತಿದ್ದೋ ಅಂತ ಅವರೇ ಹೇಳಬೇಕು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸಿಎಂ ಸಿದ್ದರಾಮಯ್ಯ ಯಾವುದೇ ಹೆಸರಿನಿಂದ ಸಂಬೋಧಿಸಿದರೂ ಅದನ್ನು ಆಶೀರ್ವಾದವಾಗಿ ಸ್ವೀಕರಿಸುವೆ: ತೇಜಸ್ವೀ ಸೂರ್ಯ, ಸಂಸದ

Follow us
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ