ಲೋಕಸಭಾ ಚುನಾವಣೆ ಫಲಿತಾಂಶ: ಗೆಲುವು ನಿಶ್ಚಿತ ಅದರೆ ಜಯದ ಅಂತರ ನೋಡಬೇಕಿದೆ ಎಂದ ರಾಘವೇಂದ್ರ

Updated on: Jun 04, 2024 | 11:17 AM

ಲೋಕಸಭಾ ಚುನಾವಣೆ ಫಲಿತಾಂಶ: ಹಲವಾರು ಬಗೆಯ ಅಪಪ್ರಚಾರಗಳ ಹೊರತಾಗಿಯೂ ತಾನು ಮುನ್ನಡೆ ಸಾಧಿಸಿ ಗೆಲುವಿನತ್ತ ಮುನ್ನುಗುತ್ತಿರುವುದು ಜನರಿಗೆ ತನ್ನ ಮೇಲಿರುವ ಪ್ರೀತಿ, ಅಭಿಮಾನ ಮತ್ತು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಇಟ್ಟುಕೊಂಡಿರುವ ವಿಶ್ವಾಸವನ್ನು ತೋರಿಸುತ್ತದೆ ಎಂದು ರಾಘವೇಂದ್ರ ಹೇಳಿದರು.

ಶಿವಮೊಗ್ಗ: ಸಂಸದ ಬಿವೈ ರಾಘವೇಂದ್ರ (BY Raghavendra) ಗೆಲುವಿನ ವಿಶ್ವಾಸದಲ್ಲಿದ್ದಾರೆ. ನಗರದಲ್ಲಿಂದು ಮತ ಎಣಿಕೆ ಕೇಂದ್ರದಿಂದ ಹೊರಬಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಎನ್ ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಕ್ಕು ನರೇಂದ್ರ ಮೋದಿಯವರು (PM Narendra Modi) ಮತ್ತೊಮ್ಮೆ ಪ್ರಧಾನಿಯಾಗುವ ನಿರೀಕ್ಷೆ ನಿಜವಾಗುತ್ತಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ (Shivamogga LS seat) ಐದಾರರು ಸುತ್ತಿನ ಮತಎಣಿಕೆಯ ನಂತರ ತಾನು 35,000 ಮತಗಳ ಅಂತರ ಸಾಧಿಸಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದ ಅವರು ಹಲವಾರು ಬಗೆಯ ಅಪಪ್ರಚಾರಗಳ ಹೊರತಾಗಿಯೂ ತಾನು ಮುನ್ನಡೆ ಸಾಧಿಸಿ ಗೆಲುವಿನತ್ತ ಮುನ್ನುಗುತ್ತಿರುವುದು ಜನರಿಗೆ ತನ್ನ ಮೇಲಿರುವ ಪ್ರೀತಿ, ಅಭಿಮಾನ ಮತ್ತು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಇಟ್ಟುಕೊಂಡಿರುವ ವಿಶ್ವಾಸವನ್ನು ತೋರಿಸುತ್ತದೆ ಎಂದು ರಾಘವೇಂದ್ರ ಹೇಳಿದರು. ಮತದಾನೋತ್ತರ ಸಮೀಕ್ಷೆಗಳು ಸಹ ನಿಜವಾಗುತ್ತಿವೆ, ತನ್ನ ಗೆಲುವಂತೂ ನಿಶ್ಚಿತ ಆದರೆ, ಗೆಲುವಿನ ಅಂತರ ಎಷ್ಟಿರಲಿದೆ ಅನ್ನೋದನ್ನು ನೋಡಬೇಕಿದೆ ಎಂದು ರಾಘವೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಶಿವಮೊಗ್ಗ ಡಿಸಿಸಿ ಬ್ಯಾಂಕ್​ ‌ಹಗರಣದಲ್ಲಿ ಎಂಪಿ ಪಾತ್ರವೂ ಇದೆ: ಬಿವೈ ರಾಘವೇಂದ್ರ ವಿರುದ್ಧ ಬೇಳೂರು ಗಂಭೀರ ಆರೋಪ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More