AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದರ್ಶನ್​ ವಿರುದ್ಧ ನೀಡಿದ್ದ ದೂರು ಹಿಂಪಡೆದು ಕ್ಷಮೆ ಕೇಳಿದ ಕನ್ನಡ ಶಫಿ

ನಟ ದರ್ಶನ್​ ವಿರುದ್ಧ ನೀಡಿದ್ದ ದೂರು ಹಿಂಪಡೆದು ಕ್ಷಮೆ ಕೇಳಿದ ಕನ್ನಡ ಶಫಿ

ಮದನ್​ ಕುಮಾರ್​
|

Updated on:Feb 23, 2024 | 2:41 PM

Share

ಜನಪ್ರಿಯ ನಟ ದರ್ಶನ್​ ವಿರುದ್ಧ ಹಲವು ದೂರುಗಳು ದಾಖಲಾಗುತ್ತಿವೆ. ಈ ನಡುವೆ ಫೆಬ್ರವರಿ 22ರಂದು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ತಾವು ನೀಡಿದ್ದ ದೂರನ್ನು ಕನ್ನಡ ಶಫಿ ವಾಪಸ್​ ಪಡೆದಿದ್ದಾರೆ. ಅಲ್ಲದೇ ಅವರು ಕ್ಷಮೆ ಕೇಳಿದ್ದಾರೆ. ‘ಕನ್ನಡದ ಮನಸ್ಸುಗಳಿಗೆ ನೋವಾಗಿದ್ದರೆ ನಮ್ಮ ಸಂಘಟನೆ ಮತ್ತು ಅಧ್ಯಕ್ಷರ ವತಿಯಿಂದ ನಾವು ಕ್ಷಮೆ ಕೇಳುತ್ತೇವೆ’ ಎಂದು ಅವರು ಹೇಳಿದ್ದಾರೆ.

ವಿಡಿಯೋ ಮೂಲಕ ಕನ್ನಡ ಶಫಿ (Kannada Shafi) ಅವರು ಕ್ಷಮೆ ಕೇಳಿದ್ದಾರೆ. ‘ಎಲ್ಲರಿಗೂ ನಮಸ್ಕಾರ, ನಾನು ಕನ್ನಡ ಶಫಿ. ಕರ್ನಾಟಕ ಪ್ರಜಾಪರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ. ಇಂದು ನಾನು ನಿಮ್ಮ ಮುಂದೆ ಬಂದಿರುವ ಉದ್ದೇಶ ಏನೆಂದರೆ, ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಒಂದು ವೇದಿಕೆಯಲ್ಲಿ ನಟ ದರ್ಶನ್​ (Darshan) ಮಾತನಾಡಿದ್ದು ಮುಜುಗರ ತಂದಿದ್ದ ವಿಚಾರ. ಹಾಗಾಗಿ ನಿನ್ನೆ ನಾವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿದ್ದೆವು. ನಾವು ಸಂಘಟನೆಯವರು ಸ್ವಲ್ಪ ಆತುರ ಮಾಡಿದ್ದೇವೆ ಎನಿಸುತ್ತದೆ. ಚಿತ್ರರಂಗದಲ್ಲಿ ಬೆಳೆದು ನಿಂತಿರುವ ಹಿರಿಯ ನಟನಿಗೆ ಇದರಿಂದ ನೋವಾಗಿದ್ದರೆ ನಮ್ಮ ಸಂಘಟನೆಗಳ ಪರವಾಗಿ ಕನ್ನಡದ ಮನಸ್ಸುಗಳಿಗೆ ಕ್ಷಮೆ ಯಾಚಿಸುತ್ತೇನೆ’ ಎಂದು ಕನ್ನಡ ಶಫಿ ಹೇಳಿದ್ದಾರೆ. ಅಲ್ಲದೇ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದಾಖಲಿಸಿದ್ದ ದೂರನ್ನು ಹಿಂಪಡೆಯುವುದಾಗಿ ಅವರು ಹೇಳಿದ್ದಾರೆ. ಇನ್ನೂ ಕೆಲವು ಸಂಘ, ಸಂಸ್ಥೆಗಳು ಕೂಡ ದರ್ಶನ್​ ವಿರುದ್ಧ ದೂರು ನೀಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Feb 23, 2024 02:36 PM
Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More