ಕನ್ನಡತಿ ಧಾರಾವಾಹಿ (Kannadathi Serial) ಹೊಸಹೊಸ ತಿರುವುಗಳನ್ನು ಪಡೆದುಕೊಂಡು ಮುಂದೆ ಸಾಗುತ್ತಿದೆ. ಹರ್ಷ ಈಗಾಗಲೇ ಭುವಿಗೆ ಪ್ರೀತಿ ವ್ಯಕ್ತಪಡಿಸಿ ಆಗಿದೆ. ಭುವಿ ಇದನ್ನು ಒಪ್ಪಿಕೊಂಡಿದ್ದಾಳೆ. ಪ್ರೀತಿ ವಿಚಾರದಲ್ಲಿ ಹರ್ಷ ತುಂಬಾನೇ ಎಫರ್ಟ್ ಹಾಕುತ್ತಿದ್ದಾನೆ. ಇದು ವೀಕ್ಷಕರಿಗೂ ಎದ್ದು ಕಾಣುತ್ತಿದೆ. ಭುವಿಯ ನಾಚಿಕೆ ಸ್ವಭಾವ ಇನ್ನೂ ಪೂರ್ತಿಯಾಗಿ ಹೋಗಿಲ್ಲ. ಆಕೆ, ವರುಧಿನಿಯ ಫ್ರೆಂಡ್ಶಿಪ್ಗೆ ಕೊಂಚ ಅಂಜುತ್ತಾಳೆ. ಆದರೆ, ದಿನ ಕಳೆದಂತೆ ಭುವಿ ನಿಧಾನವಾಗಿ ಬದಲಾಗುತ್ತಿದ್ದಾಳೆ. ಅವರ ಪಾತ್ರ ಈ ಧಾರಾವಾಹಿಯಲ್ಲಿ ತುಂಬಾನೇ ಸಿಂಪಲ್. ಈ ಕಾರಣಕ್ಕೆ ಅವರು ಸಿಂಪಲ್ ಸೀರೆ ಉಡುತ್ತಾರೆ. ಆದರೆ, ಆ ಬಗ್ಗೆ ತಕರಾರರು ಇದೆಯಂತೆ. ಈ ಬಗ್ಗೆ ರಂಜನಿ ರಾಘವನ್ (Ranjani Raghavan) ಅವರು ಟಿವಿ9 ಕನ್ನಡದ ಜತೆಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಹರ್ಷನಿಗೆ ಭುವಿ ಕಡೆಯಿಂದ ಸಿಗಲಿದೆ ಬಿಗ್ ಸರ್ಪ್ರೈಸ್; ಟಿವಿ9ಗೆ ರಂಜನಿ ರಾಘವನ್ ಎಕ್ಸ್ಕ್ಲೂಸಿವ್ ಮಾಹಿತಿ
‘ಅವಕಾಶ ಇದ್ದಿದ್ರೆ ನಾನು ಒಂದು ಝೂ ಮಾಡ್ತಿದ್ದೆ’; ‘ಕನ್ನಡತಿ’ ನಟ ಕಿರಣ್ ರಾಜ್