AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಮದುವೆ ಸಂಭ್ರಮದ ನಡುವೆ ಘೋರ ದುರಂತ!: ಲಿಫ್ಟ್ ಕೇಬಲ್ ತುಂಡಾಗಿ ತಮ್ಮನಿಗೆ ಗಂಭೀರ ಗಾಯ, ಸಿಸಿಟಿವಿಯಲ್ಲಿ  ದೃಶ್ಯ ಸೆರೆ

“ಅಣ್ಣನ ಮದುವೆ ಸಂಭ್ರಮದ ನಡುವೆ ಘೋರ ದುರಂತ!”: ಲಿಫ್ಟ್ ಕೇಬಲ್ ತುಂಡಾಗಿ ತಮ್ಮನಿಗೆ ಗಂಭೀರ ಗಾಯ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಅಕ್ಷಯ್​ ಪಲ್ಲಮಜಲು​​
|

Updated on: Apr 08, 2026 | 5:54 PM

Share

ಕಾನ್ಪುರದ ಮುಬಾರಿಕಾ ಕಲ್ಯಾಣ ಮಂಟಪದಲ್ಲಿ ಗ್ಯಾಸ್ ಕೊರತೆಯಿಂದಾಗಿ ಕಟ್ಟಿಗೆ ತರುತ್ತಿದ್ದ ವರನ ಸಹೋದರನಿಗೆ ಲಿಫ್ಟ್ ಕೇಬಲ್ ತುಂಡಾಗಿ ಬಿದ್ದ ಪರಿಣಾಮ ಗಂಭೀರ ಗಾಯಗಳಾಗಿವೆ. ಮದುವೆ ಸಮಾರಂಭದ ವೇಳೆ ಸಂಭವಿಸಿದ ಈ ದುರ್ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಲಿಫ್ಟ್ ನಿರ್ವಹಣೆ ಕೊರತೆಯೇ ಕಾರಣ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಿದ್ದಾರೆ.

ಕಾನ್ಪುರ, ಏ. 8: ಉತ್ತರ ಪ್ರದೇಶದ ಕಾನ್ಪುರದ ಮುಬಾರಿಕಾ ಕಲ್ಯಾಣ ಮಂಟಪದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಲಿಫ್ಟ್ ಕೇಬಲ್ ತುಂಡಾಗಿ ಬಿದ್ದ ಪರಿಣಾಮ ವರನ ಸಹೋದರ ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ಯಾಸ್ ಕೊರತೆಯಿಂದಾಗಿ ಅಡುಗೆಗೆ ಕಟ್ಟಿಗೆ ತರಲು ಹೋದಾಗ ಈ ಅನಾಹುತ ಸಂಭವಿಸಿದೆ. ಮದುವೆ ಸಮಾರಂಭದ ವೇಳೆ ಅಡುಗೆಗೆ ಗ್ಯಾಸ್ ಸಿಲಿಂಡರ್ ಕೊರತೆ ಉಂಟಾಗಿತ್ತು. ಈ ಕಾರಣದಿಂದಾಗಿ ವರನ ಸಹೋದರ ಕೆಳಮಹಡಿಯಿಂದ ಕಟ್ಟಿಗೆಯನ್ನು ಲಿಫ್ಟ್ ಮೂಲಕ ಮೇಲೆ ತರಲು ಪ್ರಯತ್ನಿಸುತ್ತಿದ್ದರು. ಲಿಫ್ಟ್‌ನಲ್ಲಿ ಕಟ್ಟಿಗೆಯನ್ನು ತುಂಬಿಸಿ ಕೆಳಕ್ಕೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಲಿಫ್ಟ್‌ನ ಕೇಬಲ್ ತುಂಡಾಗಿದೆ. ಕೇಬಲ್ ಕಟ್ ಆದ ತಕ್ಷಣ ಲಿಫ್ಟ್ ವೇಗವಾಗಿ ನೆಲಕ್ಕೆ ಅಪ್ಪಳಿಸಿದೆ. ಲಿಫ್ಟ್ ನೆಲಕ್ಕೆ ಅಪ್ಪಳಿಸಿದ ತೀವ್ರತೆಗೆ ಅದರಲ್ಲಿದ್ದ ವರನ ಸಹೋದರನಿಗೆ ಗಂಭೀರವಾದ ಪೆಟ್ಟು ಬಿದ್ದಿದೆ. ತಕ್ಷಣವೇ ಅಲ್ಲಿದ್ದವರು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಈ ಘಟನೆಯ ದೃಶ್ಯಗಳು ಕಲ್ಯಾಣ ಮಂಟಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನೋಡುಗರ ಎದೆ ಝಲ್ಲೆನಿಸುವಂತಿದೆ. ಕಲ್ಯಾಣ ಮಂಟಪದ ಲಿಫ್ಟ್ ಸರಿಯಾದ ನಿರ್ವಹಣೆ ಇಲ್ಲದಿರುವುದೇ ಈ ಘಟನೆಗೆ ಕಾರಣ ಎಂದು ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದು, ಕಲ್ಯಾಣ ಮಂಟಪದ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವ ಸಾಧ್ಯತೆ ಇದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us