‘ಕಾಂತಾರ 2’ ಮುಹೂರ್ತಕ್ಕೆ ಸಿದ್ಧವಾದ ಆನೆಗುಡ್ಡೆ ವಿನಾಯಕ ದೇವಸ್ಥಾನ; ಇಲ್ಲಿದೆ ವಿಡಿಯೋ

ಬಹುನಿರೀಕ್ಷಿತ ‘ಕಾಂತಾರ 2’ ಚಿತ್ರಕ್ಕೆ ಇಂದು ಮುಹೂರ್ತ ನೆರವೇರಲಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ‘ಕಾಂತಾರ 2’ ತಂಡ ಕ್ಯಾಮೆರಾಗೆ ಚಾಲನೆ ನೀಡಲಿದೆ.

‘ಕಾಂತಾರ 2’ ಮುಹೂರ್ತಕ್ಕೆ ಸಿದ್ಧವಾದ ಆನೆಗುಡ್ಡೆ ವಿನಾಯಕ ದೇವಸ್ಥಾನ; ಇಲ್ಲಿದೆ ವಿಡಿಯೋ
|

Updated on: Nov 27, 2023 | 11:36 AM

ಬಹುನಿರೀಕ್ಷಿತ ‘ಕಾಂತಾರ 2’ ಚಿತ್ರಕ್ಕೆ ಇಂದು (ನವೆಂಬರ್ 27) ಮುಹೂರ್ತ ನೆರವೇರಲಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ‘ಕಾಂತಾರ 2’ ತಂಡ ಕ್ಯಾಮೆರಾಗೆ ಚಾಲನೆ ನೀಡಲಿದೆ. ಈ ಮೊದಲು ‘ಕಾಂತಾರ’ ಸಿನಿಮಾದ (Kantara Movie) ಮುಹೂರ್ತ ಇಲ್ಲಿಯೇ ನಡೆದಿತ್ತು. ಈ ಚಿತ್ರ ದೊಡ್ಡ ಯಶಸ್ಸು ಕಂಡಿತು. ಈ ಹಿನ್ನೆಲೆಯಲ್ಲಿ ಎರಡನೇ ಪಾರ್ಟ್​ಗೆ ಇಲ್ಲಿಯೇ ಮುಹೂರ್ತ ಮಾಡಲಾಗುತ್ತಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್​ನ ವಿಜಯ್ ಕಿರಗಂದೂರು ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಈಗಾಗಲೇ ದೇವಸ್ಥಾನದಲ್ಲಿ ಬಹುತೇಕ ಸಿದ್ಧತೆಗಳು ಪೂರ್ಣಗೊಂಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us