‘ಕಾಂತಾರ 2’ ಮುಹೂರ್ತಕ್ಕೆ ಸಿದ್ಧವಾದ ಆನೆಗುಡ್ಡೆ ವಿನಾಯಕ ದೇವಸ್ಥಾನ; ಇಲ್ಲಿದೆ ವಿಡಿಯೋ

Updated on: Nov 27, 2023 | 11:36 AM

ಬಹುನಿರೀಕ್ಷಿತ ‘ಕಾಂತಾರ 2’ ಚಿತ್ರಕ್ಕೆ ಇಂದು ಮುಹೂರ್ತ ನೆರವೇರಲಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ‘ಕಾಂತಾರ 2’ ತಂಡ ಕ್ಯಾಮೆರಾಗೆ ಚಾಲನೆ ನೀಡಲಿದೆ.

ಬಹುನಿರೀಕ್ಷಿತ ‘ಕಾಂತಾರ 2’ ಚಿತ್ರಕ್ಕೆ ಇಂದು (ನವೆಂಬರ್ 27) ಮುಹೂರ್ತ ನೆರವೇರಲಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ‘ಕಾಂತಾರ 2’ ತಂಡ ಕ್ಯಾಮೆರಾಗೆ ಚಾಲನೆ ನೀಡಲಿದೆ. ಈ ಮೊದಲು ‘ಕಾಂತಾರ’ ಸಿನಿಮಾದ (Kantara Movie) ಮುಹೂರ್ತ ಇಲ್ಲಿಯೇ ನಡೆದಿತ್ತು. ಈ ಚಿತ್ರ ದೊಡ್ಡ ಯಶಸ್ಸು ಕಂಡಿತು. ಈ ಹಿನ್ನೆಲೆಯಲ್ಲಿ ಎರಡನೇ ಪಾರ್ಟ್​ಗೆ ಇಲ್ಲಿಯೇ ಮುಹೂರ್ತ ಮಾಡಲಾಗುತ್ತಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ, ಹೊಂಬಾಳೆ ಫಿಲ್ಮ್ಸ್​ನ ವಿಜಯ್ ಕಿರಗಂದೂರು ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ. ಈಗಾಗಲೇ ದೇವಸ್ಥಾನದಲ್ಲಿ ಬಹುತೇಕ ಸಿದ್ಧತೆಗಳು ಪೂರ್ಣಗೊಂಡಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us