AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ಕಾಂತಾರ ಅವಘಡ ನೆನೆದು ರಿಷಬ್ ಶೆಟ್ಟಿ ಭಾವುಕ

‘ನಾನು ಹೋಗಿಯೇ ಬಿಡುತ್ತಿದ್ದೆ, ದೈವದಿಂದ ಬದುಕಿದ್ದೇನೆ’: ಕಾಂತಾರ ಅವಘಡ ನೆನೆದು ರಿಷಬ್ ಶೆಟ್ಟಿ ಭಾವುಕ

ಮದನ್​ ಕುಮಾರ್​
|

Updated on: Sep 22, 2025 | 8:44 PM

Share

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಕೆಲಸ ಶುರು ಮಾಡಿದ ದಿನದಿಂದಲೇ ಒಂದಲ್ಲಾ ಒಂದು ಅಡೆತಡೆ ಬರುತ್ತಿತ್ತು. ಶೂಟಿಂಗ್ ಮುಗಿಯುವುದರೊಳಗೆ ಚಿತ್ರತಂಡದ ಕೆಲವರು ಮೃತರಾದರು. ಸ್ವತಃ ರಿಷಬ್ ಶೆಟ್ಟಿ ಬಹಳ ಅಪಾಯಕಾರಿಯಾದ ಸ್ಟಂಟ್ಸ್ ಮಾಡಿದರು. ಅವುಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ರಿಷಬ್ ಶೆಟ್ಟಿ ಮಾತನಾಡಿದರು.

ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾದ ಕೆಲಸ ಶುರು ಮಾಡಿದ ದಿನದಿಂದಲೇ ಒಂದಲ್ಲಾ ಒಂದು ಅಡೆತಡೆಗಳು ಬರುತ್ತಿದ್ದವು. ಸಿನಿಮಾ ಶೂಟಿಂಗ್ ಮುಗಿಯುವುದರೊಳಗೆ ಚಿತ್ರತಂಡದ ಕೆಲವರು ನಿಧನರಾದರು. ಸ್ವತಃ ರಿಷಬ್ ಶೆಟ್ಟಿ (Rishab Shetty) ಅವರು ಬಹಳ ಅಪಾಯಕಾರಿಯಾದ ಸ್ಟಂಟ್ಸ್ ಮಾಡಿದರು. ಅವುಗಳ ಬಗ್ಗೆ ಸುದ್ದಿಗೋಷ್ಠಿಯಲ್ಲಿ ರಿಷಬ್ ಶೆಟ್ಟಿ ಅವರು ಮಾತನಾಡಿದರು. ‘ಸೆಟ್ಟಲ್ಲಿ ಹಾಗಾಯ್ತು, ಹೀಗಾಯ್ತು ಅಂತ ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿತ್ತು. ಲೆಕ್ಕ ಹಾಕಿದರೆ ನಾಲ್ಕು ಅಥವಾ ಐದು ಸಲ ನಾನು ಹೋಗಿಯೇ ಬಿಡುತ್ತಿದ್ದೆ. ಆದರೆ ನಾನು ಇಂದು ಬದುಕಿ ಬಂದು ನಿಮ್ಮ ಮುಂದೆ ನಿಂತಿದ್ದೇನೆ. ಅದಕ್ಕೆ ನಮ್ಮ ಹಿಂದಿರುವ ದೈವ ಕಾರಣ ಎಂಬುದು ನನ್ನ ನಂಬಿಕೆ. ಇಡೀ ತಂಡದ ಪ್ರತಿಯೊಬ್ಬರಿಗೆ ದೈವ ಆಶೀರ್ವಾದ ಮಾಡಿದೆ’ ಎಂದು ರಿಷಬ್ ಶೆಟ್ಟಿ ಅವರು ಹೇಳಿದರು. ಈ ವೇಳೆ ಅವರು ಕೊಂಚ ಎಮೋಷನಲ್ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More