ಅಭಿಮಾನಿಗಳ ಋಣ ತೀರಿಸಲು ಕೆಲಸ ಮಾಡ್ತೀನಿ: ಮೈಸೂರಲ್ಲಿ ರಿಷಬ್ ಶೆಟ್ಟಿ ಭರವಸೆ

Updated on: Oct 16, 2025 | 9:22 PM

‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಗಿದೆ. ರಿಷಬ್ ಶೆಟ್ಟಿ ಖ್ಯಾತಿ ಹೆಚ್ಚಾಗಿದೆ. ಅನೇಕ ಊರುಗಳಿಗೆ ಈಗ ಅವರು ತೆರಳಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸುತ್ತಿದ್ದಾರೆ. ಇಂದು (ಅ.16) ಮೈಸೂರಿಗೆ ರಿಷಬ್ ಶೆಟ್ಟಿ ಭೇಟಿ ನೀಡಿದರು. ಅವರ ಅಭಿಮಾನಿಗಳಿಗೆ ಖುಷಿ ಆಯಿತು.

ಸೂಪರ್ ಹಿಟ್ ಆಗಿರುವ ‘ಕಾಂತಾರ: ಚಾಪ್ಟರ್ 1’ (Kantara Chapter 1) ಸಿನಿಮಾ ಮೂಲಕ ರಿಷಬ್ ಶೆಟ್ಟಿ ಅವರ ಖ್ಯಾತಿ ಹೆಚ್ಚಾಗಿದೆ. ಈಗ ಅವರು ಅನೇಕ ಊರುಗಳಿಗೆ ತೆರಳಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸುತ್ತಿದ್ದಾರೆ. ಇಂದು (ಅಕ್ಟೋಬರ್ 16) ಮೈಸೂರಿಗೆ ರಿಷಬ್ ಶೆಟ್ಟಿ ಭೇಟಿ ನೀಡಿದರು. ಅವರನ್ನು ಕಂಡು ಅಭಿಮಾನಿಗಳಿಗೆ ಖುಷಿ ಆಯಿತು. ಎಲ್ಲರೂ ಜೈಕಾರ ಕೂಗಿದರು. ‘ಇದು ದೊಡ್ಡ ಋಣ. ಈ ಋಣ ತೀರಿಸಲು ಪ್ರತಿ ಸಿನಿಮಾದಲ್ಲಿ ಇನ್ನೂ ಹೆಚ್ಚು ಶ್ರಮವಹಿಸಿ ಕೆಲಸ ಮಾಡುತ್ತೇವೆ. ಇನ್ನೂ ಒಳ್ಳೊಳ್ಳೆಯ ಕಥೆಯನ್ನು ನಿಮಗೆ ಹೇಳುತ್ತೇನೆ’ ಎಂದು ರಿಷಬ್ ಶೆಟ್ಟಿ (Rishab Shetty) ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us