AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..

ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on:Apr 07, 2025 | 3:57 PM

Share

ಮೂರು ದಿನಗಳ ಕಾಲ ವಾರಾಹಿ ಪಂಜುರ್ಲಿ ದೈವದ ನೇಮೋತ್ಸವ ನಡೆಯಿತು. ಕೊನೇ ದಿನ ರಿಷಬ್ ಶೆಟ್ಟಿ ಅವರು ಪತ್ನಿ ಮತ್ತು ಮಕ್ಕಳ ಜೊತೆ ಬಂದು ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಮುಂಜಾನೆವರೆಗೂ ಇದ್ದ ಅವರು ದೈವದ ಬಳಿ ಪ್ರಾರ್ಥನೆ ಮಾಡಿಕೊಂಡರು. ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ..

ವಾರಾಹಿ ಪಂಜುರ್ಲಿ (Varahi Panjurli) ದೈವದ ನೇಮೋತ್ಸವದಲ್ಲಿ ನಟ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಭಾಗಿಯಾಗಿದ್ದಾರೆ. ಪುತ್ರ ರಣ್ವಿತ್ ಶೆಟ್ಟಿ ಜನ್ಮದಿನದಂದೇ ಅವರು ನೇಮೋತ್ಸವದಲ್ಲಿ ಪಾಲ್ಗೊಂಡರು. ಮುಂದಿನ 5 ತಿಂಗಳಲ್ಲಿ ಒಳ್ಳೆಯದು ಮಾಡುವುದಾಗಿ ರಿಷಬ್ ಶೆಟ್ಟಿ ಅವರಿಗೆ ದೈವ ಭರವಸೆ ನೀಡಿದೆ. ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅವರಿಗೆ ಚಿತ್ರೀಕರಣದ ವೇಳೆ ಕೆಲವು ವಿಘ್ನಗಳು ಎದುರಾಗಿದ್ದವು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಬಾರೆಬೈಲ್​ನಲ್ಲಿ ಇರುವ ಪಂಜುರ್ಲಿ ದೇವಸ್ಥಾನಕ್ಕೆ ರಿಷಬ್ ಶೆಟ್ಟಿ (Rishab Shetty) ಭೇಟಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 07, 2025 03:53 PM
Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More