Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..

ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..

ಅಶೋಕ್​ ಪೂಜಾರಿ, ಮಂಗಳೂರು
| Updated By: ಮದನ್​ ಕುಮಾರ್​

Updated on:Apr 07, 2025 | 3:57 PM

ಮೂರು ದಿನಗಳ ಕಾಲ ವಾರಾಹಿ ಪಂಜುರ್ಲಿ ದೈವದ ನೇಮೋತ್ಸವ ನಡೆಯಿತು. ಕೊನೇ ದಿನ ರಿಷಬ್ ಶೆಟ್ಟಿ ಅವರು ಪತ್ನಿ ಮತ್ತು ಮಕ್ಕಳ ಜೊತೆ ಬಂದು ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಮುಂಜಾನೆವರೆಗೂ ಇದ್ದ ಅವರು ದೈವದ ಬಳಿ ಪ್ರಾರ್ಥನೆ ಮಾಡಿಕೊಂಡರು. ಆ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ..

ವಾರಾಹಿ ಪಂಜುರ್ಲಿ (Varahi Panjurli) ದೈವದ ನೇಮೋತ್ಸವದಲ್ಲಿ ನಟ ರಿಷಬ್ ಶೆಟ್ಟಿ ಅವರು ಕುಟುಂಬ ಸಮೇತರಾಗಿ ಭಾಗಿಯಾಗಿದ್ದಾರೆ. ಪುತ್ರ ರಣ್ವಿತ್ ಶೆಟ್ಟಿ ಜನ್ಮದಿನದಂದೇ ಅವರು ನೇಮೋತ್ಸವದಲ್ಲಿ ಪಾಲ್ಗೊಂಡರು. ಮುಂದಿನ 5 ತಿಂಗಳಲ್ಲಿ ಒಳ್ಳೆಯದು ಮಾಡುವುದಾಗಿ ರಿಷಬ್ ಶೆಟ್ಟಿ ಅವರಿಗೆ ದೈವ ಭರವಸೆ ನೀಡಿದೆ. ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅವರಿಗೆ ಚಿತ್ರೀಕರಣದ ವೇಳೆ ಕೆಲವು ವಿಘ್ನಗಳು ಎದುರಾಗಿದ್ದವು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಬಾರೆಬೈಲ್​ನಲ್ಲಿ ಇರುವ ಪಂಜುರ್ಲಿ ದೇವಸ್ಥಾನಕ್ಕೆ ರಿಷಬ್ ಶೆಟ್ಟಿ (Rishab Shetty) ಭೇಟಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 07, 2025 03:53 PM