Video: ಕನ್ಯಾಕುಮಾರಿ ಕಡಲತೀರದಲ್ಲಿ ಸತ್ತ ದೈತ್ಯ ತಿಮಿಂಗಿಲ ಪತ್ತೆ

Updated on: Dec 10, 2025 | 1:16 PM

ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಮಿಡಲಂ ಕಡಲತೀರದಲ್ಲಿ ಬೃಹತ್ ಸತ್ತ ತಿಮಿಂಗಿಲವೊಂದು ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಪರಿಶೀಲನೆ ನಡೆಸಿದೆ. ದೊಡ್ಡ ಹಡಗಿಗೆ ಡಿಕ್ಕಿ ಹೊಡೆದ ಕಾರಣ ತಿಮಿಂಗಿಲ ಮೃತಪಟ್ಟಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ವಿಧಿವಿಜ್ಞಾನ ಪರೀಕ್ಷೆ ಬಳಿಕ ತಿಮಿಂಗಿಲವನ್ನು ಕಡಲತೀರದಲ್ಲೇ ಮಣ್ಣು ಮಾಡಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ತಮಿಳುನಾಡು, ಡಿ.10: ಕನ್ಯಾಕುಮಾರಿ ಜಿಲ್ಲೆಯ ಮಿಡಲಂ ಕಡಲತೀರದಲ್ಲಿ ಮಂಗಳವಾರ ದೊಡ್ಡ ಆಕಾರದ ಸತ್ತ ತಿಮಿಂಗಿಲವೊಂದು ಪತ್ತೆಯಾಗಿದೆ. ಮಿಡಲಂ ನಿವಾಸಿಯೊಬ್ಬರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸತ್ತ ತಿಮಿಂಗಿಲವನ್ನು ಪರಿಶೀಲನೆ ನಡೆಸಿದ ಅರಣ್ಯ ಅಧಿಕಾರಿಗಳು, ದೊಡ್ಡ ಹಡಗಿಗೆ ಈ ಮೀನು ಡಿಕ್ಕಿ ಹೊಡೆದಿರಬಹುದು ಎಂದು ಶಂಕಿಸಿದ್ದಾರೆ. ಇನ್ನು ಈ ಬಗ್ಗೆ ತಿಮಿಂಗಿಲದ ವಿಧಿವಿಜ್ಞಾನ ಪರೀಕ್ಷೆ ನಡೆಸಿದ ನಂತರ ಕಡಲತೀರದಲ್ಲಿ ಮಣ್ಣು ಮಾಡಿದ್ದಾರೆ.

ವಿಡಿಯೋ ಸ್ಟೋರಿ ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More