AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kargil Vijay Divas: ಕಾರ್ಗಿಲ್ ವಿಜಯ್ ದಿವಸ ಹಿನ್ನೆಲೆಯಲ್ಲಿ ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!

Kargil Vijay Divas: ಕಾರ್ಗಿಲ್ ವಿಜಯ್ ದಿವಸ ಹಿನ್ನೆಲೆಯಲ್ಲಿ ಹುತಾತ್ಮ ವೀರ ಸೈನಿಕರಿಗೆ ಡಿಕೆ ಪುಷ್ಪನಮನ!

ಭಾವನಾ ಹೆಗಡೆ
|

Updated on: Jul 26, 2026 | 1:08 PM

Share

ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 1999ರ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೇನೆಯು ಸಾಧಿಸಿದ ವಿಜಯವನ್ನು ಮತ್ತು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಬಲಿದಾನವನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಸಮಾರಂಭದಲ್ಲಿ ಮಿಲಿಟರಿ ಸಿಬ್ಬಂದಿಯು ಹುತಾತ್ಮ ಸೈನಿಕರಿಗೆ ಗೌರವ ವಂದನೆ ಸಲ್ಲಿಸಿದರು. ಸಲಾಮಿ ಶಸ್ತ್ರ ಮತ್ತು ಶೋಕ ಶಸ್ತ್ರದೊಂದಿಗೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಮಹಾನ್ ತ್ಯಾಗವನ್ನು ಸ್ಮರಿಸಲಾಯಿತು.

ಬೆಂಗಳೂರು, ಜುಲೈ 26: ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. 1999ರ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೇನೆಯು ಸಾಧಿಸಿದ ವಿಜಯವನ್ನು ಮತ್ತು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಬಲಿದಾನವನ್ನು ಸ್ಮರಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹುತಾತ್ಮ ಯೋಧರಿಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಸಮಾರಂಭದಲ್ಲಿ ಮಿಲಿಟರಿ ಸಿಬ್ಬಂದಿಯು ಹುತಾತ್ಮ ಸೈನಿಕರಿಗೆ ಗೌರವ ವಂದನೆ ಸಲ್ಲಿಸಿದರು. ಸಲಾಮಿ ಶಸ್ತ್ರ ಮತ್ತು ಶೋಕ ಶಸ್ತ್ರದೊಂದಿಗೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಮಹಾನ್ ತ್ಯಾಗವನ್ನು ಸ್ಮರಿಸಲಾಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us