ಯುವತಿಗೆ ವಿನಾಕಾರಣ ಕಿರುಕುಳ ನೀಡಿದ ಆರೋಪ; ಸ್ಥಳೀಯರಿಂದ ಆರೋಪಿಗೆ ಬಿತ್ತು ಗೂಸಾ

Edited By:

Updated on: Dec 28, 2023 | 7:46 PM

ಕಾರ್ಕಳದ ಖಾಸಗಿ ಪೈನಾನ್ಸ್ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಯುವತಿಗೆ, ವ್ಯಕ್ತಿಯೊಬ್ಬ ವಿನಾಕಾರಣ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರ ಗುಂಪು ವ್ಯಕ್ತಿಯನ್ನು ಕಾರ್ಕಳ ಬಸ್ ನಿಲ್ದಾಣ(Karkala Bus Stand)ದಲ್ಲಿ ಎಳೆದಾಡಿ ಮುಖಕ್ಕೆ ಮಂಗಳಾರತಿ ಮಾಡಿದ ಘಟನೆ ಬುಧವಾರ ನಡೆದಿದೆ.

ಉಡುಪಿ, ಡಿ.28: ಕಾರ್ಕಳದ ಖಾಸಗಿ ಪೈನಾನ್ಸ್ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಯುವತಿಗೆ, ವ್ಯಕ್ತಿಯೊಬ್ಬ ವಿನಾಕಾರಣ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರ ಗುಂಪು ವ್ಯಕ್ತಿಯನ್ನು ಕಾರ್ಕಳ ಬಸ್ ನಿಲ್ದಾಣ(Karkala Bus Stand)ದಲ್ಲಿ ಎಳೆದಾಡಿ ಮುಖಕ್ಕೆ ಮಂಗಳಾರತಿ ಮಾಡಿದ ಘಟನೆ ಬುಧವಾರ ನಡೆದಿದೆ. ಇರ್ವತ್ತೂರಿನ ಜಗದೀಶ್ ಪೂಜಾರಿ ಎಂಬಾತ ಕಳೆದ ಹಲವು ದಿನಗಳಿಂದ ಕಾರ್ಕಳದ ಫೈನಾನ್ಸ್​ನಲ್ಲಿ ಅಕೌಂಟೆಂಟ್ ಆಗಿದ್ದ ನಂದಳಿಕೆ ಗ್ರಾಮದ ಯುವತಿಯನ್ನು‌ ಪದೇ ಪದೇ ಹಿಂಬಾಲಿಸಿ ಅಡ್ಡಗಟ್ಟಿ ಮಾತನಾಡಿಸಲು ಯತ್ನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಬುಧವಾರ ಸಂಜೆ ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಆರೋಪಿ ಆಕೆಯನ್ನು ಹಿಂಬಾಲಿಸಿ ಕಿರುಕುಳ ನೀಡಿದಾಗ ಸ್ಥಳೀಯರು ಚಪಲಚೆನ್ನಿಗರಾಯನನ್ನು ಹಿಡಿದು ಎಳೆದಾಡಿ ಹಿಗ್ಗಾಮುಗ್ಗಾ ಬೈದು ಮುಖಕ್ಕೆ ಮಂಗಳಾರತಿ ಮಾಡಿದ್ದಾರೆ. ಈ ಘಟನೆಯ ಬಳಿಕ ಯುವತಿ ಈತನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿ‌ ಜಗದೀಶ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More