ಬೆಂಗಳೂರಲ್ಲಿ ತಮಿಳು ನಟನ ಸುದ್ದಿಗೋಷ್ಠಿ ಅರ್ಧಕ್ಕೆ ನಿಲ್ಲಿಸಿದ ಕನ್ನಡಪರ ಹೋರಾಟಗಾರರು

Updated on: Sep 28, 2023 | 8:52 PM

Siddharth Press Meet in Bengaluru: ಕರ್ನಾಟಕದಲ್ಲಿ ಕಾವೇರಿ ನೀರಿಗಾಗಿ ಹೋರಾಟ ನಡೆಯುತ್ತಿದೆ. ತಮಿಳುನಾಡು ಮತ್ತು ಕರ್ನಾಟಕದ ನಡುವೆ ಬಿಕ್ಕಟ್ಟು ನಿರ್ಮಾಣ ಆಗಿದೆ. ಈ ಸಂದರ್ಭದಲ್ಲಿ ತಮಿಳು ನಟನ ಸಿನಿಮಾವನ್ನು ಬೆಂಗಳೂರಿನಲ್ಲಿ ಪ್ರಚಾರ ಮಾಡಿದ್ದನ್ನು ಕನ್ನಡಪರ ಹೋರಾಟಗಾರರು ಖಂಡಿಸಿದ್ದಾರೆ. ಸಿನಿಮಾದ ಸುದ್ದಿಗೋಷ್ಠಿಯನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ.

ತಮಿಳಿನ ಖ್ಯಾತ ನಟ ಸಿದ್ದಾರ್ಥ್​ (Siddharth) ಅಭಿನಯದ ಹೊಸ ಸಿನಿಮಾ ಕನ್ನಡಕ್ಕೆ ‘ಚಿಕ್ಕು’ ಶೀರ್ಷಿಕೆಯಲ್ಲಿ ಡಬ್​ ಆಗಿದೆ. ಬೆಂಗಳೂರಿನಲ್ಲಿ ಇಂದು (ಸೆಪ್ಟೆಂಬರ್​ 28) ಈ ಸಿನಿಮಾದ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಸದ್ಯ ಕರ್ನಾಟಕದಲ್ಲಿ ಕಾವೇರಿ ನೀರಿಗಾಗಿ (Cauvery Water) ಹೋರಾಟ ನಡೆಯುತ್ತಿದೆ. ತಮಿಳುನಾಡು ಮತ್ತು ಕರ್ನಾಟಕದ ನಡುವೆ ಬಿಕ್ಕಟ್ಟು ನಿರ್ಮಾಣ ಆಗಿದೆ. ಈ ಸಂದರ್ಭದಲ್ಲಿ ತಮಿಳು ನಟನ ಸಿನಿಮಾವನ್ನು ಬೆಂಗಳೂರಿನಲ್ಲಿ ಪ್ರಚಾರ ಮಾಡಿದ್ದನ್ನು ಕನ್ನಡಪರ ಹೋರಾಟಗಾರರು ಖಂಡಿಸಿದ್ದಾರೆ. ಸುದ್ದಿಗೋಷ್ಠಿ (Siddharth Press Meet) ನಡೆಯುತ್ತಿದ್ದ ಸ್ಥಳಕ್ಕೆ ಹೋರಾಟಗಾರರು ನುಗ್ಗಿದ್ದಾರೆ. ‘ಬಿಗುವಿನ ವಾತಾವರಣ ಇರುವಾಗ ಕರ್ನಾಟಕದಲ್ಲಿ ತಮಿಳು ಸಿನಿಮಾಗೆ ಪ್ರಚಾರ ಮಾಡಿದರೆ ಘರ್ಷಣೆಗೆ ಕಾರಣ ಆಗುವುದಿಲ್ಲವೇ’ ಎಂದು ಪ್ರಶ್ನಿಸಿದ್ದೂ ಅಲ್ಲದೇ, ‘ಇದು ಆದೇಶ ಅಲ್ಲ. ನಾವು ಮನವಿ ಮಾಡುತ್ತಿದ್ದೇವೆ. ದಯವಿಟ್ಟು ಇದನ್ನು ನಿಲ್ಲಿಸಿ’ ಎಂದಿದ್ದಕ್ಕೆ ಸಿದ್ದಾರ್ಥ್​ ಅವರು ಸುದ್ದಿಗೋಷ್ಠಿಯಿಂದ ಅರ್ಧಕ್ಕೆ ಹೊರನಡೆದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More