ಕೆಲಸ ಏನೂ ಅನ್ನೋದೇ ಗೊತ್ತಿಲ್ಲ ನಿಮ್ಗೆ, ನಾವೇನು ಮಣ್ಣು ತಿನ್ನೋದಾ? ಮಹಿಳೆ ಫುಲ್ ಗರಂ

Updated on: Dec 10, 2025 | 5:08 PM

ಸುರ್ವಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದರೆ, ಇತ್ತ ಹೊರಗಡೆ ಸಾಲು ಸಾಲು ಪ್ರತಿಭಟನೆಗಳು ನಡೆದಿವೆ. ಅದರಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಟ್ಟಂತೆ ನಮಗೂ ಗೌರವ ಧನ ಹೆಚ್ಚಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ದಿನೇಶ್ ಗುಂಡೂರಾವ್, ನೀವು ಈಗ ತಿಂಗಳಿಗೆ ಹದಿನೈದು ಸಾವಿರ ವೇತನ ಪಡೆಯುತ್ತಿದ್ದೀರಿ ಎಂದರು. ಈ ಮಾತು ಹೇಳುತ್ತಿದ್ದಂತೆಯೇ ಆಶಾ ಕಾರ್ಯಕರ್ತೆಯರು ಸಿಡಿದೆದ್ದಿದ್ದು, ಇಲ್ಲ ಯಾರಿಗೂ ಅಷ್ಟು ಹಣ ಸಿಗುತ್ತಿಲ್ಲ. ದಾರಿ ತಪ್ಪಿಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಾಗಾದ್ರೆ, ಏನೆಲ್ಲಾ ಆಯ್ತು ಎನ್ನುವುದನ್ನು ವಿಡಿಯೋದಲ್ಲಿ ನೀವೇ ನೋಡಿ.

ಬೆಳಗಾವಿ, (ಡಿಸೆಂಬರ್ 10): ಸುರ್ವಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದರೆ, ಇತ್ತ ಹೊರಗಡೆ ಸಾಲು ಸಾಲು ಪ್ರತಿಭಟನೆಗಳು ನಡೆದಿವೆ. ಅದರಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಕೊಟ್ಟಂತೆ ನಮಗೂ ಗೌರವ ಧನ ಹೆಚ್ಚಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ದಿನೇಶ್ ಗುಂಡೂರಾವ್, ನೀವು ಈಗ ತಿಂಗಳಿಗೆ ಹದಿನೈದು ಸಾವಿರ ವೇತನ ಪಡೆಯುತ್ತಿದ್ದೀರಿ ಎಂದರು. ಈ ಮಾತು ಹೇಳುತ್ತಿದ್ದಂತೆಯೇ ಆಶಾ ಕಾರ್ಯಕರ್ತೆಯರು ಸಿಡಿದೆದ್ದಿದ್ದು, ಇಲ್ಲ ಯಾರಿಗೂ ಅಷ್ಟು ಹಣ ಸಿಗುತ್ತಿಲ್ಲ. ದಾರಿ ತಪ್ಪಿಸಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಹಾಗಾದ್ರೆ, ಏನೆಲ್ಲಾ ಆಯ್ತು ಎನ್ನುವುದನ್ನು ವಿಡಿಯೋದಲ್ಲಿ ನೀವೇ ನೋಡಿ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More