ಬೆಳಗಾವಿ ಅಧಿವೇಶನ; ಪೃಥ್ವಿಸಿಂಗ್ ಹಲ್ಲೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಬಂಧಿಸಿ ಕ್ರಮ ಜರುಗಿಸಲಾಗುವುದು: ಜಿ ಪರಮೇಶ್ವರ್, ಗೃಹ ಸಚಿವ

ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರಣ ಅದನ್ನು ಹಳ್ಳ ಹಿಡಿಸಲಾಗುತ್ತಿದೆಯೇ ಅಂತ ವಿಪಕ್ಷ ನಾಯಕರು ಕೇಳಿದಾಗ ಉತ್ತರಿಸಲು ಎದ್ದು ನಿಂತ ಪರಮೇಶ್ವರ್, ದೂರಿನ ಪ್ರತಿಯನ್ನು ಸದನದಲ್ಲಿ ಓದಿದರು. ಎರಡನೇ ಪುಟದ ಎರಡನೆ ಪ್ಯಾರಾ ಓದುವಂತೆ ವಿಜಯೇಂದ್ರ ಮನವಿ ಮಾಡಿದಾಗ ಪರಮೇಶ್ವರ್ ಅದನ್ನು ಓದಿದರು.

ಬೆಳಗಾವಿ ಅಧಿವೇಶನ; ಪೃಥ್ವಿಸಿಂಗ್ ಹಲ್ಲೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಬಂಧಿಸಿ ಕ್ರಮ ಜರುಗಿಸಲಾಗುವುದು: ಜಿ ಪರಮೇಶ್ವರ್, ಗೃಹ ಸಚಿವ
|

Updated on: Dec 07, 2023 | 6:35 PM

ಬೆಳಗಾವಿ: ಚಳಿಗಾಲದ ಬೆಳಗಾವಿ ಅಧಿವೇಶನದಲ್ಲಿ ಇಂದು ಬಿಜೆಪಿ ಕಾರ್ಯಕರ್ತ ಪೃಥ್ವಿಸಿಂಗ್ (BJP worker Prithvi Singh) ಮೇಲೆ ಹರಿತವಾದ ಆಯುಧದಿಂದ ನಡೆಸಿರುವ ಹಲ್ಲೆ ಪ್ರಕರಣ ಪ್ರತಿಧ್ವನಿಸಿತು. ನಿನ್ನೆ ಮೊನ್ನೆ ಸದನದಲ್ಲಿ ಗೈರುಹಾಜರಾಗಿದ್ದ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಇಂದು ಪ್ರತ್ಯಕ್ಷರಾದರು. ಕಾರ್ಯಕರ್ತನ ಮೇಲೆ ಗಂಭೀರವಾದ ಹಲ್ಲೆ ನಡೆದರೂ ಬೆಳಗಾವಿ ಪೊಲೀಸರು ಇನ್ನೂ ಯಾಕೆ ಐಪಿಸಿ ಸೆಕ್ಷನ್ 307 ರ ಅಡಿ ಕೇಸ್ ದಾಖಲಿಸಿಕೊಂಡಿಲ್ಲ ಮತ್ತು ಇದುವರೆಗೆ ಯಾಕೆ ಒಬ್ಬನನ್ನೂ ಬಂಧಿಸಿಲ್ಲ ಅಂತ ಬಿಜೆಪಿ ಶಾಸಕರಾದ ಬಿವೈ ವಿಜಯೇಂದ್ರ (BY Vijayendra), ಸುನೀಲ ಕುಮಾರ್ (Sunil Kumar), ಸುರೇಶ್ ಕುಮಾರ್ (Suresh Kumar) ಸಭಾಧ್ಯಕ್ಷರ ಮೂಲಕ ಪರಮೇಶ್ವರ್ ಅವರನ್ನು ಪ್ರಶ್ನಿಸಿದರು. ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರಣ ಅದನ್ನು ಹಳ್ಳ ಹಿಡಿಸಲಾಗುತ್ತಿದೆಯೇ ಅಂತ ವಿಪಕ್ಷ ನಾಯಕರು ಕೇಳಿದಾಗ ಉತ್ತರಿಸಲು ಎದ್ದು ನಿಂತ ಪರಮೇಶ್ವರ್, ದೂರಿನ ಪ್ರತಿಯನ್ನು ಸದನದಲ್ಲಿ ಓದಿದರು.

ಎರಡನೇ ಪುಟದ ಎರಡನೆ ಪ್ಯಾರಾ ಓದುವಂತೆ ವಿಜಯೇಂದ್ರ ಮನವಿ ಮಾಡಿದಾಗ ಪರಮೇಶ್ವರ್ ಅದನ್ನು ಓದಿದರು. ದೂರುದಾರ ಪೃಥ್ವಿಸಿಂಗ್ ತಮ್ಮ ಮೇಲೆ ಹಲ್ಲೆ ನಡೆದಾಗ ಚನ್ನರಾಜ ಹಟ್ಟಿಹೊಳಿ ಅಲ್ಲೇ ಇದ್ದರು, ಅವರ ಅಣತಿ ಮೇರೆಗೆ ಹಲ್ಲೆ ನಡೆಯಿತು ಎಂದು ಹೇಳಿದ್ದಾರೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​