AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಅಧಿವೇಶನದಲ್ಲಿ ಇಂದಿನಿಂದ ಅಸಲಿ ಕದನ! ನಾಗೇಂದ್ರ ರಾಜೀನಾಮೆಗೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್

ವಿಧಾನಸಭೆ ಅಧಿವೇಶನದಲ್ಲಿ ಇಂದಿನಿಂದ ಅಸಲಿ ಕದನ! ನಾಗೇಂದ್ರ ರಾಜೀನಾಮೆಗೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್

ಗಣಪತಿ ಶರ್ಮಾ
|

Updated on: Aug 17, 2026 | 8:24 AM

Share

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ವಾಲ್ಮೀಕಿ ನಿಗಮ ಹಗರಣದ ಆರೋಪಿ ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿಯಲಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಸದನದ ಒಳಗೆ ಹಾಗೂ ಹೊರಗೆ ಜೆಡಿಎಸ್‌ನೊಂದಿಗೆ ಸೇರಿ ಪ್ರತಿಭಟನೆ ನಡೆಸಲು ಸಿದ್ಧವಾಗಿದೆ. ಮಹಿಳಾ ಸಚಿವರ ಕೊರತೆ, ಪಿಂಚಣಿ ಸ್ಥಗಿತ ಸೇರಿದಂತೆ ಹಲವು ವಿಷಯಗಳ ಬಗ್ಗೆಯೂ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ.

ಬೆಂಗಳೂರು, ಆಗಸ್ಟ್ 17: ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ ಮುಂಗಾರು ಅಧಿವೇಶನದ ಮೂರನೇ ದಿನದ ಕಲಾಪಗಳು ಇಂದು ನಡೆಯಲಿದ್ದು, ಪ್ರತಿಪಕ್ಷಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿವೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅವ್ಯವಹಾರ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿಯಲಿದೆ. ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ಬಿಜೆಪಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ತೀವ್ರಗೊಳಿಸಲು ಸಿದ್ಧವಾಗಿದೆ.

ಬಿಜೆಪಿ, ಜೆಡಿಎಸ್‌ನೊಂದಿಗೆ ಸೇರಿ ಸರ್ಕಾರದ ವಿರುದ್ಧ ಸಮರ ಸಾರಿದೆ. ವಾಲ್ಮೀಕಿ ನಿಗಮದ ಹಗರಣ, ಮಹಿಳಾ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದು, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ನೆಪದಲ್ಲಿ ವಿಧವಾ, ವೃದ್ಧಾಪ್ಯ, ವಿಕಲಚೇತನರ ಪಿಂಚಣಿ ಸ್ಥಗಿತಗೊಳಿಸಿರುವುದು, ಬಿಡದಿ ಟೌನ್‌ಶಿಪ್ ಯೋಜನೆ ಸ್ಥಗಿತದ ಬೇಡಿಕೆ ಹಾಗೂ ಆರ್‌ಎಸ್‌ಎಸ್ ಗುರಿಯಾಗಿಸಿಕೊಂಡು ರೂಪಿಸಲಾದ ಹೊಸ ಮಸೂದೆ ವಿರುದ್ಧ ಪ್ರತಿಭಟನೆಗೆ ಯೋಜನೆ ರೂಪಿಸಲಾಗಿದೆ.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಬಲವಂತವಾಗಿ ಕೆಳಗಿಳಿಸಿ ಸಾಂವಿಧಾನಿಕ ಹುದ್ದೆಗಳ ದುರುಪಯೋಗ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪಿಸಲು ಸಿದ್ಧವಾಗಿದೆ. ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲದೆ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೃಹತ್ ಪ್ರತಿಭಟನೆಗಳನ್ನು ನಡೆಸಲು ಸಜ್ಜಾಗಿವೆ. ಒಟ್ಟಾರೆಯಾಗಿ, ಇಂದಿನಿಂದ ಉಭಯ ಸದನಗಳಲ್ಲಿ ತೀವ್ರ ರಾಜಕೀಯ ಕದನ ನಡೆಯುವ ಸಾಧ್ಯತೆ ಇದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us