ಬೆಳಗಾವಿ ಅಧಿವೇಶನ; ಪಿಎಸ್​ಐ ಹಗರಣದಲ್ಲಿ ಭಾಗಿಯಾಗಿರುವವರನ್ನು ಚೆನ್ನಾಗಿ ತದುಕಿ ಜೈಲಿಗೆ ಹಾಕಬೇಕು: ಬಸನಗೌಡ ಪಾಟೀಲ್ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Dec 04, 2023 | 7:31 PM

Karnataka Assembly Winter Session: ಸದನದಲ್ಲಿ ಮಾತಾಡುವಾಗ ಬಸನಗೌಡ ಯತ್ನಾಳ್ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕಾಲೆಳೆದರು. ಪಿಎಸ್ ಐ ನೇಮಕಾತಿ ಹಗರಣವನ್ನು ಹಾಗೆ ಹೀಗೆ ಮಾಡ್ತೀವಿ ಅಂತ ವೀರಭದ್ರನ ಹಾಗೆ ವೀರಾವೇಶದಿಂದ ಕೂಗಾಡಿದ ಸಚಿವರು ಈಗ್ಯಾಕೆ ಸುಮ್ಮನಾಗಿದ್ದಾರೋ ಅಂತ ಲೇವಡಿ ಮಾಡಿದಾಗ ಉತ್ತರಿಲು ಸಚಿವ ಎದ್ದುನಿಂತರು.

ಬೆಳಗಾವಿ: ಬೆಳಗಾವಿ ವಿಧಾನ ಸಭಾ ಅಧಿವೇಶನದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸರ್ಕಾರಕ್ಕಿಂತ ತಮ್ಮ ಪಕ್ಷದ ಸದಸ್ಯರಿಗೆ ಹೆಚ್ಚು ಕಂಟಕಪ್ರಾಯರಾಗುತ್ತಿದ್ದಾರೆ! ನಿಮಗೆ ನೆನಪಿರಬಹುದು, ಪಿಎಸ್ ಐ ನೇಮಕಾತಿ ಹಗರಣ (PSI recruitment scam) ಬೆಳಕಿಗೆ ಬಂದಾಗ ಅವರು ನೇರವಾಗಿ ಅಗಿನ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪನವರ ಮಗ ಬಿವೈ ವಿಜಯೇಂದ್ರ ಮೇಲೆ ಆರೋಪ ಮಾಡಿದ್ದರು. ಇವತ್ತು ಸದನದಲ್ಲಿ ಡಿಸೆಂಬರ್ 23ರಂದು ನಡೆಯಲಿರುವ ಪಿಎಸ್ ಐ ಪರೀಕ್ಷೆಗೆ ಸಂಬಂಧಿಸಿದಂತೆ ಮಾತಾಡಿದ ಯತ್ನಾಳ್ ಪರೀಕ್ಷೆ ಬರೆಯಲಿರುವ ಉದ್ಯೋಗಾಕಾಂಕ್ಷಿಗಳಿಗೆ ಪೂರ್ವತಯಾರಿಗಾಗಿ ಸಮಯ ಸಿಕ್ಕಿರದ ಕಾರಣ ಪರೀಕ್ಷೆಯನ್ನು 6 ತಿಂಗಳು ಇಲ್ಲವೇ ಕನಿಷ್ಟ 3 ತಿಂಗಳು ಮುಂದೂಡಬೇಕೆಂದು ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿ ಮಾಡುತ್ತಿರುವುದಾಗಿ ಹೇಳಿದರು. ಮುಂದುವರಿದು ಮಾತಾಡಿದ ಅವರು ಪಿಎಸ್ ಐ ನೇಮಕಾತಿ ಹಗರಣವನ್ನು ತನಿಖೆಗೆ ಒಪ್ಪಿಸಿ ಅದರಲ್ಲಿ ಶಾಮೀಲಾಗಿರುವವರನ್ನು ಒದ್ದು ಜೈಲಿಗೆ ಹಾಕಿಸುವ ಕೆಲಸವಾಗಬೇಕು ಅಂತ ಒತ್ತಾಯಿಸುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Dec 04, 2023 07:25 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.