ಕರ್ನಾಟಕ ಬಂದ್​ಗೆ ಸ್ಟಾರ್ ಕಲಾವಿದರು ಸಾಥ್ ನೀಡ್ತಾರಾ? ಸಾರಾ ಗೋವಿಂದು ಪ್ರತಿಕ್ರಿಯೆ

Updated on: Mar 03, 2025 | 4:15 PM

ಕರ್ನಾಟಕ ಬಂದ್​ಗೆ ಮಾ.22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಅದಕ್ಕೆ ಕನ್ನಡ ಚಿತ್ರರಂಗದ ಕಲಾವಿದರು ಬೆಂಬಲ ನೀಡ್ತಾರಾ ಇಲ್ಲವಾ ಎಂಬ ಪ್ರಶ್ನೆ ಮೂಡಿವೆ. ಈ ಕುರಿತು ಸಾರಾ ಗೋವಿಂದು ಮಾತನಾಡಿದ್ದಾರೆ. ‘ನಾನು ಇನ್ನೂ ಯಾರನ್ನೂ ಭೇಟಿಯಾಗಿಲ್ಲ. ಒಂದು ಸಭೆ ಕರೆಯುತ್ತೇವೆ. ಕಲಾವಿದರು, ಪ್ರದರ್ಶಕರು, ನಿರ್ಮಾಪಕರು, ಹಂಚಿಕೆದಾರರು ಎಲ್ಲರನ್ನೂ ಸೇರಿಸಿ ಬಂದ್ ಮಾಡಬೇಕು’ ಎಂದು ಅವರು ಹೇಳಿದ್ದಾರೆ.

ಮಾರ್ಚ್​ 22ರಂದು ಕರ್ನಾಟಕ ಬಂದ್​ಗೆ (Karnataka Bandh) ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಆದರೆ ಇದಕ್ಕೆ ಚಿತ್ರರಂಗದ ಸ್ಟಾರ್ ಕಲಾವಿದರು ಬೆಂಬಲ ನೀಡುತ್ತಾರಾ ಎಂಬ ಪ್ರಶ್ನೆ ಮೂಡಿವೆ. ಈ ಬಗ್ಗೆ ಸಾರಾ ಗೋವಿಂದು ಅವರು ಮಾತನಾಡಿದ್ದಾರೆ. ‘ಇನ್ನೂ ಯಾರನ್ನೂ ನಾನು ಭೇಟಿ ಆಗಿಲ್ಲ. ಅದಕ್ಕಾಗಿ ಒಂದು ಸಭೆಯನ್ನು ಕರೆಯುತ್ತೇವೆ. ಕಲಾವಿದರು, ನಿರ್ಮಾಪಕರು, ಪ್ರದರ್ಶಕರು, ಹಂಚಿಕೆದಾರರು ಸೇರಿದಂತೆ ಎಲ್ಲರನ್ನೂ ಸೇರಿಸಿ ಬಂದ್ ಮಾಡಬೇಕು. ಅವರೆಲ್ಲ ಕೈ ಜೋಡಿಸಿದಾಗ ಮಾತ್ರ ಇದು ಸಾಧ್ಯವಾಗುತ್ತದೆ’ ಎಂದು ಸಾರಾ ಗೋವಿಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More