ಕರ್ನಾಟಕ ಬಂದ್: ರಾಜ್ಯದ ಶಾಲಾ, ಕಾಲೇಜುಗಳಿಗಿಲ್ಲ ಇಂದು ರಜೆ
Karnataka Bandh: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ. ಪೋಷಕರು ಪರೀಕ್ಷೆಗಳ ಕಾರಣದಿಂದ ಬಂದ್ಗೆ ಬೆಂಬಲ ನೀಡದಿರಲು ನಿರ್ಧರಿಸಿದ್ದಾರೆ. ಬಸ್ ಸಂಚಾರ ಸಹಜವಾಗಿದ್ದು, ಜನಜೀವನಕ್ಕೆ ಅಡ್ಡಿಯಾಗಿಲ್ಲ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ, ಆದರೆ ಶಾಂತಿಯುತ ಪ್ರತಿಭಟನೆಗೆ ಸೂಚಿಸಲಾಗಿದೆ.
ಬೆಂಗಳೂರು, ಆಗಸ್ಟ್ 13: ಕರ್ನಾಟಕ ಬಂದ್ಗೆ ಕರೆ ನಡುವೆಯೂ ರಾಜ್ಯದ ಶಾಲಾ-ಕಾಲೇಜುಗಳು ಎಂದಿನಂತೆ ಇಂದು ಕಾರ್ಯನಿರ್ವಹಿಸಲಿವೆ, ಯಾವುದೇ ರಜೆ ಘೋಷಿಸಲಾಗಿಲ್ಲ. ತರಗತಿಗಳು ನಡೆಯಲಿದ್ದು, ಪರೀಕ್ಷೆಗಳು ನಡೆಯುತ್ತಿರುವ ಕಾರಣ ಮಕ್ಕಳಿಗೆ ತೊಂದರೆಯಾಗಬಾರದೆಂಬುದು ಪೋಷಕರ ಸಂಘಟನೆಗಳು ಬಂದ್ಗೆ ಬೆಂಬಲ ನೀಡದಿರಲು ತೀರ್ಮಾನಿಸಿವೆ. ರಾಜ್ಯದ ಎಲ್ಲಾ ಕಡೆ ಎಂದಿನಂತೆ ಶಾಲಾ, ಕಾಲೇಜುಗಳು ಓಪನ್ ಆಗುತ್ತಿವೆ. ಅಂಗಡಿ ಮುಂಗಟ್ಟುಗಳು, ಮಾರ್ಕೆಟ್ಗಳು ಓಪನ್ ಆಗಿವೆ. ಬಹುತೇಕ ಜಿಲ್ಲೆಗಳಲ್ಲಿ ಬಂದ್ಗೆ ನೈತಿಕ ಬೆಂಬಲ ಮಾತ್ರ ಘೋಷಣೆ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

