AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

36 ಸಾವಿರ ಕೋಟಿ ರೂ. ಲೂಟಿ ಆರೋಪ: ರಾಜ್ಯಪಾಲರಾಯ್ತು ಈಗ ಲೋಕಾಯುಕ್ತಕ್ಕೂ ಬಿಜೆಪಿ ದೂರು

36 ಸಾವಿರ ಕೋಟಿ ರೂ. ಲೂಟಿ ಆರೋಪ: ರಾಜ್ಯಪಾಲರಾಯ್ತು ಈಗ ಲೋಕಾಯುಕ್ತಕ್ಕೂ ಬಿಜೆಪಿ ದೂರು

ರಮೇಶ್ ಬಿ. ಜವಳಗೇರಾ
|

Updated on: Jun 10, 2026 | 5:42 PM

Share

ಬೆಂಗಳೂರಿನ ಕಸದ ಟೆಂಡರ್​​​ನಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಆರೋಪ ಮಾಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದು, ಸಿಬಿಐ ತನಿಗೆ ಮನವಿ ಮಾಡಿದೆ. ಇದರ ಬೆನ್ನಲ್ಲೇ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೂ ದೂರು ನೀಡಿದೆ. 

ಬೆಂಗಳೂರು, (ಜೂನ್ 10): ಬೆಂಗಳೂರಿನ ಕಸದ ಟೆಂಡರ್​​​ನಲ್ಲಿ ಅಕ್ರಮವೆಸಗಲಾಗಿದೆ ಎಂದು ಆರೋಪಿಸಿ ಕರ್ನಾಟಕ ಬಿಜೆಪಿ ಆರೋಪ ಮಾಡಿದೆ. ಈ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಗಾಗಲೇ ರಾಜ್ಯಪಾಲರಿಗೆ ದೂರು ನೀಡಿದ್ದು, ಸಿಬಿಐ ತನಿಗೆ ಮನವಿ ಮಾಡಿದೆ. ಇದರ ಬೆನ್ನಲ್ಲೇ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ಲೋಕಾಯುಕ್ತಕ್ಕೂ ದೂರು ನೀಡಿದೆ.  ​​ 36 ಸಾವಿರ ಕೋಟಿ ರೂಪಾಯಿಯ ಬೆಂಗಳೂರು ಕಸದ ಟೆಂಡರ್ ನಲ್ಲಿ ಬರೋಬ್ಬರಿ 10 ಸಾವಿರ ಕೋಟಿ ರೂ. ಕಿಕ್‌ಬ್ಯಾಕ್ ಪಡೆಯಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ವಿಧಾ‌ನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಧೀರಜ್ ಮುನಿರಾಜು ದೂರು ನೀಡಿದ್ದು,ಅಕ್ರಮದ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ನೋಡಿ: ಏನಿದು ಕಸದಿಂದ ಕಾಸು? ಬಹುದೊಡ್ಡ ಹಗರಣವನ್ನ ಎಳೆ ಎಳೆಯಾಗಿ ಬಿಚ್ಚಿಟ್ಟ ಆರ್ ಅಶೋಕ್

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More