ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ: ಆರ್. ಅಶೋಕ್ ಸ್ಪಷ್ಟನೆ
TV9 Kannada News: ಕರ್ನಾಟಕ ಎಂಎಲ್ಸಿ ಚುನಾವಣೆ ವೇಳೆ ಅಡ್ಡಮತದಾನ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ಪಕ್ಷಕ್ಕೆ ಮೋಸ ಮಾಡಿದವರನ್ನು ಕ್ಷಮಿಸುವುದಿಲ್ಲ, ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ ಅವರು, ಕಾಂಗ್ರೆಸ್ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿ/ಬೆಂಗಳೂರು, ಜೂನ್ 23: ಎಂಎಲ್ಸಿ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ. ಧರ್ಮಸ್ಥಳವನ್ನು ರಾಜಕೀಯ ಕ್ಷೇತ್ರ ಮಾಡುವುದು ಬೇಡ ಎಂದು ಸ್ಪಷ್ಟಪಡಿಸಿದ ಅವರು, ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಅಡ್ಡಮತದಾನದ ಮೂಲಕ ಪಕ್ಷಕ್ಕೆ ಮೋಸ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು . ಯಾರು ಪಕ್ಷಕ್ಕೆ ದ್ರೋಹ ಬಗೆದಿದ್ದಾರೋ ಅವರಿಗೆ ತಕ್ಕ ಬುದ್ಧಿ ಕಲಿಸುತ್ತೇವೆ. ಇಂತಹ ದುಷ್ಕೃತ್ಯ ಮತ್ತೆ ಮಾಡಬಾರದು ಎಂದು ಅವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jun 23, 2026 12:04 PM
Follow Us
