AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ, ದಾವಣಗೆರೆಯಲ್ಲಿ ಗುಪ್ತ್​ ಗುಪ್ತ್​ ಸಭೆ

ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ, ದಾವಣಗೆರೆಯಲ್ಲಿ ಗುಪ್ತ್​ ಗುಪ್ತ್​ ಸಭೆ

ರಮೇಶ್ ಬಿ. ಜವಳಗೇರಾ
|

Updated on: Sep 29, 2024 | 2:46 PM

Share

ಒಂದೆಡೆ ಆಡಳಿತರೂಢ ಕಾಂಗ್ರೆಸ್​ಗೆ ಮುಡಾ ಹಗರಣ ಸಂಕಷ್ಟ ಎದುರಾಗಿದ್ದರೆ, ಮತ್ತೊಂದೆಡೆ ವಿರೋಧ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದೆ. ಹೌದು.. ಕರ್ನಾಟಕ ಬಿಜೆಪಿಯಲ್ಲಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಹಠಾವೋ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ವಿರೋಧಿ ಬಣದ ಶಾಸಕರು, ನಾಯಕರು ಗುಪ್ತ್​ ಗುಪ್ತ್​ ಸಭೆ ನಡೆಸುತ್ತಿದ್ದಾರೆ.

ದಾವಣಗೆರೆ, (ಸೆಪ್ಟೆಂಬರ್, 29): ಕರ್ನಾಟಕ ಬಿಜೆಪಿ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಹಠಾವೋ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿವೈ ವಿಜಯೇಂದ್ರ ವಿರೋಧಿ ಶಾಸಕರು ಹಾಗೂ ನಾಯರು ಪದೇ ಪದೇ ಪ್ರತ್ಯೇಕ ಸಭೆ ಮಾಡುತ್ತಲೇ ಇದ್ದಾರೆ. ಇತ್ತೀಚಗೆ ಬೆಳಗಾವಿಯಲ್ಲಿ ಸೀಕ್ರೆಟ್​ ಮೀಟಿಂಗ್ ನಡೆದಿತ್ತು, ಇದಾದ ಮೇಲೆ ಕುಮಾರ್ ಬಂಗಾರಪ್ಪ ಹಾಗೇ ಬಿಜೆಪಿ ಉಚ್ಚಾಟಿತ ನಾಯಕ ಕೆಎಸ್​ ಈಶ್ವರಪ್ಪ ನಿವಾಸದಲ್ಲಿ ರೆಬೆಲ್​ ನಾಯಕರು ಸಭೆ ನಡೆಸಿದ್ದಾರೆ. ಇದೀಗ ಇಂದು (ಸೆ.29) ದಾವಣಗೆರೆಯಲ್ಲಿ ಗುಪ್ತ್​ ಗುಪ್ತ್​ ಸಭೆ ನಡೆಸಿದ್ದಾರೆ. ದಾವಣಗೆರೆ ನಗರದ ಜಿಎಂಐಟಿ ಕಾಲೇಜ್ ಅತಿಥಿ ಗೃಹದಲ್ಲಿ ನಾಯಕರು ಸಭೆ ನಡೆಸಿದ್ದು, ಈ ಸಭೆಯಲ್ಲಿ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದರಾದ ಪ್ರತಾಪ್ ಸಿಂಹ, ಜಿಎಂ ಸಿದ್ದೇಶ್ವರ, ಹರಿಹರ ಬಿಜೆಪಿ ಶಾಸಕ ಬಿ ಪಿ ಹರೀಶ್ ಸೇರಿದಂತೆ ಇತರೆ ರೆಬೆಲ್ ನಾಯಕರು ಇದ್ದರು.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More