ಜೆಡಿಎಸ್​-ಬಿಜೆಪಿ ನಾಯಕರ ಸಭೆ ಬಳಿಕ ಮಹತ್ವದ ಸುದ್ದಿಗೋಷ್ಠಿಯ ನೇರಪ್ರಸಾರ

|

Updated on: Jul 28, 2024 | 6:55 PM

ಬಿಜೆಪಿ ರಾಜ್ಯಾಧ್ಯಕ್ಷರು ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಬೆಂಗಳೂರಿನಲ್ಲಿಂದು ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದು, ಇದರ ನೇರಪ್ರಸಾರ ಇಲ್ಲಿದೆ ನೋಡಿ.

ಬೆಂಗಳೂರು, (ಜುಲೈ 28): ಕರ್ನಾಟಕ ರಾಜ್ಯರಾಜಕಾರಣದಲ್ಲಿ ಮಹತ್ವದ ವಿದ್ಯಮಾನಗಳು ನಡೆಯುತ್ತಿವೆ. ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ದ್ವೇಷದ ರಾಜಕಾರಣದ ನಡೆದಂತೆ ಕಾಣುತ್ತಿದೆ. ಒಂದೆಡೆ ಕಾಂಗ್ರೆಸ್ ಸರ್ಕಾರದ ಹಗರಣ ವಿರುದ್ಧ ವಿಪಕ್ಷಗಳಾದ ಜೆಡಿಎಸ್​ ಮತ್ತು ಬಿಜೆಪಿ ಜಂಟಿಯಾಗಿ ಮುಗಿಬಿದ್ದಿದ್ದರೆ, ಇತ್ತ ಕಾಂಗ್ರೆಸ್ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಾದ ಹಗರಣಗಳನ್ನು ಎತ್ತಲು ಮುಂದಾಗಿದೆ. ಇದರ ಮಧ್ಯ ಈ ಬಾರಿಯ ಕೇಂದ್ರ ಬಜೆಟ್​​ನಲ್ಲಿ ಕರ್ನಾಟಕ್ಕೆ ಏನು ಕೊಟ್ಟಿ ಎಂದು ಕಾಂಗ್ರೆಸ್, ಬಿಜೆಪಿ ಮೇಲೆ ಮುಗಿಬಿದ್ದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯ ಇದೀಗ ವಿಪಕ್ಷಗಳು ಸರ್ಕಾರದ ಹಗರಣದ ವಿರುದ್ಧ ಹೇಗೆಲ್ಲಾ ಧ್ವನಿ ಎತ್ತಬೇಕೆಂದು ತಂತ್ರರೂಪಿಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಮೇಲೆ ಕೇಳಿಬಂದಿರುವ ಮುಡಾ ಹಗರಣ ಹಿಡಿದುಕೊಂಡು ಮೈಸೂರಿಗೆ ಪಾದಯಾತ್ರೆ ಮಾಡಬೇಕೆಂಬ ಚಿಂತನೆ ನಡೆಸಿದೆ. ಈ ಸಂಬಂಧ ಈಗಾಗಲೇ ಮಾತುಕತೆಗಳು ಆಗಿದ್ದು, ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷರು ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವವಾಗಿದೆ. ಇದರಿಂದ ಅವರನ್ನು ಕೂಡಲೇ ಆಸ್ಪತ್ರಗೆ ಕರೆದುಕೊಂಡು ಹೋಗಲಾಗಿದ್ದು,  ಯಡಿಯೂರಪ್ಪ ಸೇರಿದಂತೆ ಇತರೆ ನಾಯಕರು ಸುದ್ದಿಗೋಷ್ಠಿ ಮುಂದುವರಿಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.

Follow us on