Karnataka Budget 2024: ಬಜೆಟ್​ ಅಧಿವೇಶನದಲ್ಲಿ ಜೈ ಶ್ರೀರಾಮ ಘೋಷಣೆ ಕೂಗಿದ ಬಿಜೆಪಿ, ಕಾಂಗ್ರೆಸ್​ ನಾಯಕರು

|

Updated on: Feb 12, 2024 | 1:20 PM

ಕರ್ನಾಟಕ ಬಜೆಟ್​ ಅಧಿವೇಶನ 2024 ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ರಾಜ್ಯಪಾಲರ ಭಾಷಣ ಮುಗಿಯುತ್ತಿದ್ದಂತೆ ಬಿಜೆಪಿ ನಾಯಕರು ಭಾರತ್​ ಮಾತಾ ಕೀ ಜೈ, ಜೈ ಶ್ರೀರಾಮ ಎಂದು ಘೋಷಣೆ ಕೂಗಿದರು. ಕೂಡಲೆ ಕಾಂಗ್ರೆಸ್​ ಶಾಸಕರೂ ಕೂಡ ಜೈ ಶ್ರೀರಾಮ ಎಂದು ಘೋಷಣೆ ಕೂಗಲು ಆರಂಭಿಸಿದರು.

ಬೆಂಗಳೂರು, ಫೆಬ್ರವರಿ 12: ಕರ್ನಾಟಕ ಬಜೆಟ್​ ಅಧಿವೇಶನ 2024 (Karnataka Budget 2024) ಆರಂಭವಾಗಿದೆ. ಹತ್ತು ದಿನಗಳ ಕಾಲ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddramaiah) ಅವರು ಫೆಬ್ರವರಿ 16 ರಂದು ಬಜೆಟ್​ ಮಂಡನೆ ಮಾಡಲಿದ್ದಾರೆ. ಅಧಿವೇಶನ ಇಂದು (ಫೆ.12) ಆರಂಭವಾಗಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಿದರು. ಬಜೆಟ್​ ಅಧಿವೇಶನದ ಮೊದಲ ದಿನ ಬಿಜೆಪಿ ನಾಯಕರು ಕೇಸರಿ ಶಾಲೆ ಧರಿಸಿಕೊಂಡು ಬಂದಿದ್ದರು. ಕೇಸರಿ ಶಾಲು ಧರಿಸಿಕೊಂಡು ಬಂದ ಬಿಜೆಪಿ ನಾಯಕರು ರಾಜ್ಯಪಾಲರ ಭಾಷಣ ಮುಗಿಯುತ್ತಿದ್ದಂತೆ ಭಾರತ್​ ಮಾತಾ ಕೀ ಜೈ, ಜೈ ಶ್ರೀರಾಮ ಎಂದು ಘೋಷಣೆ ಕೂಗಿದರು. ಕೂಡಲೆ ಕಾಂಗ್ರೆಸ್​ ಶಾಸಕರೂ ಕೂಡ ಜೈ ಶ್ರೀರಾಮ ಎಂದು ಘೋಷಣೆ ಕೂಗಲು ಆರಂಭಿಸಿದರು. ಎರಡೂ ಪಕ್ಷದ ನಾಯಕರ ನಡುವೆ ಪೈಪೋಟಿ ಏರ್ಪಟ್ಟಿತು. ಈ ನಡುವೆ ಧಾರವಾಡ ಜಿಲ್ಲೆ ಉಸ್ತುವಾರಿ ಸಚಿವೆ ಸಂತೋಷ್​ ಲಾಡ್​ ಜೈ ಭೀಮ್​ ಎಂದು ಘೋಷಣೆ ಕೂಗಿದರು.

Follow us on