AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2026: ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ

Karnataka Budget 2026: ಸಮಾಜ ಕಲ್ಯಾಣ ಇಲಾಖೆಯ 2,500 ಹುದ್ದೆ ಭರ್ತಿ ಮಾಡಲು ಸರ್ಕಾರ ನಿರ್ಧಾರ

ಅಕ್ಷತಾ ವರ್ಕಾಡಿ
|

Updated on: Mar 06, 2026 | 2:38 PM

Share

ಕರ್ನಾಟಕ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳು, ಪರಿಶಿಷ್ಟ ಪಂಗಡಗಳು ಮತ್ತು ಅಲ್ಪಸಂಖ್ಯಾತರಿಗೆ 1500 ಕೋಟಿ ರೂ. ಅನುದಾನ, 2500 ಹುದ್ದೆಗಳ ಭರ್ತಿ, ಹೊಸ ವಿದ್ಯಾರ್ಥಿ ನಿಲಯಗಳು, ಸ್ವಯಂ ಉದ್ಯೋಗ ಯೋಜನೆಗಳು, ಆಧುನಿಕ ಲಾಂಡ್ರಿ ಸ್ಥಾಪನೆ, ಸಲೂನ್ ಸಾಲ ಹಾಗೂ ಶಿಕ್ಷಣ ಮತ್ತು ಆಡಳಿತ ಸುಧಾರಣೆಗೆ ಮಹತ್ವದ ಕೊಡುಗೆಗಳನ್ನು ಘೋಷಿಸಿದ್ದಾರೆ.

2026ನೇ ಕರ್ನಾಟಕ ಬಜೆಟ್​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳು, ಪರಿಶಿಷ್ಟ ಪಂಗಡಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. 2026-27ನೇ ಸಾಲಿನಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ 1500 ಕೋಟಿ ರೂ. ಒದಗಿಸಲಾಗುವುದು. ಜೊತೆಗೆ ಈ ಇಲಾಖೆಗಳಲ್ಲಿ ಖಾಲಿ ಇರುವ 2500 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿಗಳ ವಿದ್ಯುದ್ದೀಕರಣಕ್ಕೆ ನೀಡುವ ಮೊತ್ತವನ್ನು 75 ಸಾವಿರದಿಂದ 1.5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕರಿಗೆ ಫಾಸ್ಟ್ ಫುಡ್ ಟ್ರಕ್, ಮೊಬೈಲ್ ಕಿಚನ್ ಇತ್ಯಾದಿಗಳಿಗೆ 4 ಲಕ್ಷದವರೆಗೆ ಸಹಾಯಧನ ದೊರೆಯಲಿದೆ. ಬೆಂಗಳೂರಿನ ಸುಮನಹಳ್ಳಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಆಡಳಿತ ಸೌಧ ಸಂಕೀರ್ಣ ನಿರ್ಮಿಸಲಾಗುವುದು. ಅಲ್ಲದೆ, ವಿವಿಧ ಜಿಲ್ಲೆಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 50 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us