ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜನವರಿ 08) ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್ಮೆಂಟ್/ಫ್ಲಾಟ್ಗಳಿಗೆ ‘ಎ-ಖಾತಾ’ ನೀಡಲು ಅನುಮೋದನೆ ನೀಡಿದೆ.
ಬೆಂಗಳೂರು, (ಜನವರಿ 08): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು (ಜನವರಿ 08) ವಿಧಾನ ಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet) ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಪ್ರಮುಖವಾಗಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಕ್ರಮ ಪ್ರಾಧಿಕಾರದ ಅನುಮೋದನೆ ಪಡೆಯದೆ ರಚಿಸಿರುವ ಬಡಾವಣೆಗಳಲ್ಲಿನ ‘ಬಿ-ಖಾತಾ” ನಿವೇಶನ/ಕಟ್ಟಡ/ಅಪಾರ್ಟ್ಮೆಂಟ್/ಫ್ಲಾಟ್ಗಳಿಗೆ ‘ಎ-ಖಾತಾ’ ನೀಡಲು ಅನುಮೋದನೆ ನೀಡಿದೆ.

