28 ಕೈದಿಗಳಿಗೆ ಬಿಡುಗಡೆ ಭಾಗ್ಯ: ಸನ್ನಡತೆ ಆಧಾರದಲ್ಲಿ ರಿಲೀಸ್ಗೆ ಸಚಿವ ಸಂಪುಟ ಅಸ್ತು
ಸನ್ನಡತೆ ಆಧಾರದಲ್ಲಿ 29 ಜೀವಾವಧಿ ಶಿಕ್ಷಾ ಬಂಧಿಗಳ ಅವಧಿಪೂರ್ವ ಬಿಡುಗಡೆಗೆ ಕರ್ನಾಟಕ ಸಚಿವ ಸಂಪುಟ ಅಸ್ತು ಎಂದಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಈ ಕುರಿತು ಪ್ರಕಟಣೆ ಹೊರಡಿಸಿದ್ದು, 45 ಪ್ರಕರಣಗಳ ಪೈಕಿ 29 ಬಂಧಿತರ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ. ಈ ನಿರ್ಧಾರವು ರಾಜ್ಯಪಾಲರ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ.
ಬೆಂಗಳೂರು, ಆಗಸ್ಟ್ 22: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ಮಂದಿ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಅವಧಿಪೂರ್ವ ಬಿಡುಗಡೆ ಮಾಡಲು ಕರ್ನಾಟಕ ಸಚಿವ ಸಂಪುಟ ಅನುಮೋದನೆ ನೀಡಿದೆ. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಈ ಮಹತ್ವದ ನಿರ್ಧಾರದ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಪ್ರಾರಂಭದಲ್ಲಿ 45 ಪ್ರಕರಣಗಳ ಪರಿಶೀಲನೆ ನಡೆಸಲಾಗಿದ್ದು, ಅದರಲ್ಲಿ 28 ಬಂಧಿತರ ಬಿಡುಗಡೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿತ್ತು. ನಂತರ, ಒಂದು ಪ್ರಕರಣದಲ್ಲಿ ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆಯೂ ಲಭ್ಯವಾಗಿದ್ದು, ಒಟ್ಟು 29 ಜೀವಾವಧಿ ಶಿಕ್ಷಾ ಬಂಧಿಗಳು ಅವಧಿಪೂರ್ವ ಬಿಡುಗಡೆಗೆ ಅರ್ಹರಾಗಿದ್ದಾರೆ. ಕೈದಿಗಳ ಜೈಲು ವಾಸದ ಅವಧಿ, ಅವರ ನಡವಳಿಕೆ ಮತ್ತು ನಿಗದಿತ ಮಾನದಂಡಗಳನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಸಚಿವ ಸಂಪುಟದ ಈ ತೀರ್ಮಾನವನ್ನು ಈಗ ರಾಜ್ಯಪಾಲರ ಅನುಮೋದನೆಗಾಗಿ ಕಳುಹಿಸಲಾಗಿದೆ. ರಾಜ್ಯಪಾಲರ ಅಂತಿಮ ಅಂಕಿತ ದೊರೆತ ನಂತರ ಜೈಲಿನಿಂದ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
