ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ದೆಹಲಿಗೆ ತೆರಳುವ ಮುನ್ನ ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​

Edited By:

Updated on: Jul 15, 2026 | 9:48 PM

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪಕ್ಷ ಸಂಘಟನೆ ವಿಚಾರವಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಎಐಸಿಸಿ ಮತ್ತು ಕೆಪಿಸಿಸಿ ವತಿಯಿಂದ ನಡೆಯುತ್ತಿರುವ ಸಂಘಟನ್ ಸರ್ಜಾನ್ ಅಭಿಯಾನ್ ಕುರಿತು ಚರ್ಚೆ ನಡೆಸುವುದು ಪ್ರಮುಖ ಉದ್ದೇಶ. ಕರ್ನಾಟಕದಲ್ಲಿ ಈ ಅಭಿಯಾನವನ್ನು ಪ್ರಾರಂಭಿಸುವ ಬಗ್ಗೆ ಘೋಷಣೆ ಮಾಡಿದ್ದು, ಇದರ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಯಲಿದೆ.

ದೇವನಹಳ್ಳಿ, ಜುಲೈ 15: ಸಿಎಂ ಡಿಕೆ ಶಿವಕುಮಾರ್​ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಕೌಂಟ್​ಡೌನ್ ಶುರುವಾಗಿದೆ. ಈಗಾಗಲೇ ಹಲವು ಸಚಿವಾಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್​​​ ಇಂದು 5:20ರ ವಿಮಾನದಲ್ಲಿ ಕೆಂಪೇಗೌಡ ಏರ್ ಪೋರ್ಟ್​ನಿಂದ ದೆಹಲಿಗೆ ಪ್ರಯಾಣ ಬೆಳೆಸಿದರು. ಅದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಎಲ್ಲಾ ಶಾಸಕರಿಗೂ, ಕೇಳಲಿಕ್ಕೆ, ಹೇಳುವುದಕ್ಕೆ ಹಕ್ಕಿದೆ. ಅದರ ತೀರ್ಮಾನವನ್ನ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆ ವಿಚಾರವನ್ನ ಬಹಳಕೂಲಂಕಷವಾಗಿ ನೋಡಿ ತೀರ್ಮಾನ ಮಾಡುತ್ತದೆ. ಎಲ್ಲಾ ವಿಚಾರಗಳು ಕೂಡ ಉಸ್ತುವಾರಿ ಸುರ್ಜೇವಾಲ ಅವರ ಬಳಿ ಇದೆ, ಅವರು ಚರ್ಚೆ ಮಾಡಿದಾಗ ಗೊತ್ತಾಗುತ್ತದೆ’’ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us