ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ದೆಹಲಿಗೆ ತೆರಳುವ ಮುನ್ನ ಬಿಕೆ ಹರಿಪ್ರಸಾದ್ ಏನಂದ್ರು ನೋಡಿ
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಪಕ್ಷ ಸಂಘಟನೆ ವಿಚಾರವಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಎಐಸಿಸಿ ಮತ್ತು ಕೆಪಿಸಿಸಿ ವತಿಯಿಂದ ನಡೆಯುತ್ತಿರುವ ಸಂಘಟನ್ ಸರ್ಜಾನ್ ಅಭಿಯಾನ್ ಕುರಿತು ಚರ್ಚೆ ನಡೆಸುವುದು ಪ್ರಮುಖ ಉದ್ದೇಶ. ಕರ್ನಾಟಕದಲ್ಲಿ ಈ ಅಭಿಯಾನವನ್ನು ಪ್ರಾರಂಭಿಸುವ ಬಗ್ಗೆ ಘೋಷಣೆ ಮಾಡಿದ್ದು, ಇದರ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಯಲಿದೆ.
ದೇವನಹಳ್ಳಿ, ಜುಲೈ 15: ಸಿಎಂ ಡಿಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಹಲವು ಸಚಿವಾಕಾಂಕ್ಷಿಗಳು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇನ್ನು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಇಂದು 5:20ರ ವಿಮಾನದಲ್ಲಿ ಕೆಂಪೇಗೌಡ ಏರ್ ಪೋರ್ಟ್ನಿಂದ ದೆಹಲಿಗೆ ಪ್ರಯಾಣ ಬೆಳೆಸಿದರು. ಅದಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘‘ಎಲ್ಲಾ ಶಾಸಕರಿಗೂ, ಕೇಳಲಿಕ್ಕೆ, ಹೇಳುವುದಕ್ಕೆ ಹಕ್ಕಿದೆ. ಅದರ ತೀರ್ಮಾನವನ್ನ ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಆ ವಿಚಾರವನ್ನ ಬಹಳಕೂಲಂಕಷವಾಗಿ ನೋಡಿ ತೀರ್ಮಾನ ಮಾಡುತ್ತದೆ. ಎಲ್ಲಾ ವಿಚಾರಗಳು ಕೂಡ ಉಸ್ತುವಾರಿ ಸುರ್ಜೇವಾಲ ಅವರ ಬಳಿ ಇದೆ, ಅವರು ಚರ್ಚೆ ಮಾಡಿದಾಗ ಗೊತ್ತಾಗುತ್ತದೆ’’ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
