AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋರಾದ ಕಾಂಗ್ರೆಸ್ ಸಂಪುಟ ಸರ್ಕಸ್: ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು

ಜೋರಾದ ಕಾಂಗ್ರೆಸ್ ಸಂಪುಟ ಸರ್ಕಸ್: ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು

ಅಕ್ಷಯ್​ ಪಲ್ಲಮಜಲು​​
|

Updated on:Jul 16, 2026 | 7:14 AM

Share

ಕರ್ನಾಟಕದಲ್ಲಿ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್‌ನಲ್ಲಿ ಚಟುವಟಿಕೆ ಗರಿಗೆದರಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಹರಿಪ್ರಸಾದ್ ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಇವರ ಬೆನ್ನಲ್ಲೇ ಸಂಪುಟದಲ್ಲಿ ಸ್ಥಾನ ಪಡೆಯಲು ಆಕಾಂಕ್ಷಿ ಶಾಸಕರು ಮತ್ತು ಎಂಎಲ್​ಸಿಗಳು ಕೂಡ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ತೀವ್ರ ಲಾಬಿ ನಡೆಸುತ್ತಿದ್ದಾರೆ. ಇದು ಕಾಂಗ್ರೆಸ್ ಸರ್ಕಾರಕ್ಕೆ ಸವಾಲಾಗಿದೆ.

ಬೆಂಗಳೂರು, ಜು.16: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ 2.0 ರಚನೆಯಾದ ಬೆನ್ನಲ್ಲೇ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದೆ. ಈ ಕುರಿತು ಕಾಂಗ್ರೆಸ್ ವಲಯದಲ್ಲಿ ಸಂಪುಟ ಸರ್ಕಸ್ ಆರಂಭವಾಗಿದ್ದು, ಸಚಿವ ಸ್ಥಾನ ಆಕಾಂಕ್ಷಿಗಳನ್ನು ತೀವ್ರ ಕುತೂಹಲ ಕೆರಳಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲು ಅವರು ದೆಹಲಿ ತಲುಪಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಅವರ ದೆಹಲಿ ಭೇಟಿ ಬೆನ್ನಲ್ಲೇ, ಸಚಿವ ಸ್ಥಾನದ ಆಕಾಂಕ್ಷಿಗಳು ಕೂಡ ದೆಹಲಿಯತ್ತ ದೌಡಾಯಿಸಿದ್ದಾರೆ. ಸದ್ಯ 24 ಶಾಸಕರು ಮತ್ತು 12 ಎಂಎಲ್​ಸಿಗಳು ದೆಹಲಿಯಲ್ಲಿದ್ದು, ಇನ್ನೂ ಐವರು ಶಾಸಕರು ಮತ್ತು ಇಬ್ಬರು ಎಂಎಲ್​ಸಿಗಳು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಇವರೆಲ್ಲರೂ ತಮ್ಮದೇ ಆದ ರೀತಿಯಲ್ಲಿ ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ನಾಯಕರ ಮಟ್ಟದಲ್ಲಿ ತೀವ್ರ ಲಾಬಿ ನಡೆಸುತ್ತಿದ್ದಾರೆ. ಸಂಪುಟ ವಿಸ್ತರಣೆ ಪ್ರಕ್ರಿಯೆಯು ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಪಕ್ಷದ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿದೆ. ಎಲ್ಲ ಆಕಾಂಕ್ಷಿಗಳನ್ನೂ ತೃಪ್ತಿಪಡಿಸುವುದು ಕಷ್ಟಕರವಾಗಿದ್ದು, ಬಿಕ್ಕಟ್ಟನ್ನು ಸಮರ್ಥವಾಗಿ ನಿಭಾಯಿಸುವುದು ಹೇಗೆ ಎಂಬುದನ್ನು ಕಾದು ನೋಡಬೇಕಿದೆ. ಈ ಕುರಿತು ಹಲವು ಸುತ್ತಿನ ಚರ್ಚೆಗಳು ನಡೆಯುವ ಸಾಧ್ಯತೆಯಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 16, 2026 06:46 AM

Follow Us