ಸಚಿವ ಸಂಪುಟ ವಿಸ್ತರಣೆ ಮತ್ತಷ್ಟು ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ ಹರಿಪ್ರಸಾದ್
ಮುಖ್ಯಾಂಶಗಳು
- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರು ಪ್ರವಾಸ
- ಸಚಿವ ಸಂಪುಟ ವಿಸ್ತರಣೆ ಸಭೆ ಮುಂದೂಡಿಕೆ
- ಖರ್ಗೆ ಬಂದ ಬಳಿಕ ವಿಸ್ತೃತ ಚರ್ಚೆ ಮಾಡುವುದಾಗಿ ಹೇಳಿರುವ ರಾಹುಲ್ ಗಾಂಧಿ
ತೀವ್ರ ಕುತೂಹಲ ಮೂಡಿಸಿರುವ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗಲಿದೆ. ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಮಾತುಕತೆಗಾಗಿ ಈಗಾಗಲೇ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ದೆಹಲಿ ತೆರಳಿದ್ದಾರೆ. ಸುರ್ಜೆವಾಲಾ, ವೇಣುಗೋಪಾಲ್ ಹಾಗೂ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಆದ್ರೆ, ಪ್ರಮುಖವಾಗಿ ಎಐಸಿಸಿಅ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಹೀಗಾಗಿ ಸಂಪುಟ ವಿಸ್ತರಣೆ ಸಂಬಂಧ ನಡೆಯುವ ಸಭೆ ಎರಡ್ಮೂರು ದಿನಗಳ ಕಾಲ ಮುಂದೆ ಹೋಗಿದೆ.
ನವದೆಹಲಿ, (ಜುಲೈ 16): ತೀವ್ರ ಕುತೂಹಲ ಮೂಡಿಸಿರುವ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗಲಿದೆ. ಸಂಪುಟ ವಿಸ್ತರಣೆ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಮಾತುಕತೆಗಾಗಿ ಈಗಾಗಲೇ ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ದೆಹಲಿ ತೆರಳಿದ್ದಾರೆ. ಸುರ್ಜೆವಾಲಾ, ವೇಣುಗೋಪಾಲ್ ಹಾಗೂ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದಾರೆ. ಆದ್ರೆ, ಪ್ರಮುಖವಾಗಿ ಎಐಸಿಸಿಅ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಗೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಹೀಗಾಗಿ ಸಂಪುಟ ವಿಸ್ತರಣೆ ಸಂಬಂಧ ನಡೆಯುವ ಸಭೆ ಎರಡ್ಮೂರು ದಿನಗಳ ಕಾಲ ಮುಂದೆ ಹೋಗಿದೆ. ಈ ಬಗ್ಗೆ ಸ್ವತಃ ಕೆಪಿಸಿಸಿಅ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರೇ ಮಾಹಿತಿ ನೀಡಿದ್ದಾರೆ.
ರಾಹುಲ್ ಗಾಂಧಿ ಜೊತೆಗೆ ಪ್ರಾಥಮಿಕ ಹಂತದ ಚರ್ಚೆ ಮಾಡಿದ್ದು, ಖರ್ಗೆ ಬಂದ ಬಳಿಕ ವಿಸ್ತೃತ ಚರ್ಚೆ ಮಾಡುವುದಾಗಿ ರಾಹುಲ್ ಗಾಂಧಿ ಅವರು ರಾಜ್ಯ ನಾಯಕರಿಗೆ ತಿಳಿಸಿದ್ದಾರೆ. ಅಲ್ಲದೇ ಅಗತ್ಯ ಬಿದ್ದರೆ ವಾಪಸ್ ಕರೆಯುವುದಾಗಿಯೂ ಹೇಳಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಸಂಪುಟ ವಿಸ್ತರಣೆ ಮತ್ತೆ ಕಗ್ಗಾಂಟಾಗಿಯೇ ಉಳಿದಿದ್ದು,ಇನ್ನೊಂದೆಡೆ ಸಚಿವಾಕ್ಷಾಂಕ್ಷಿಗಳಿಗೆ ಕೊಂಚ ನಿರಾಸೆಯಾಗಿದೆ.

